ಅವಳನ್ನು ಪ್ರೀತಿಸಿ ಮದುವೆಯಾದ ಅವನೇ ಅವಳನ್ನು ಕೊಂದ!

Date:

ಅವರಿಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದವರು. ಎರಡೂ ಕುಟುಂಬದ ವಿರೋಧ ಕಟ್ಟಿಕೊಂಡು ಹೊಸ ಜೀವನ ಆರಂಭಿಸಿದ ಅವರ ನಡುವೆ ಅದ್ಯಾವ ವಿಷಯಕ್ಕೆ ಜಗಳವಾಯಿತೋ ಆಕೆಯ ಕೊಲೆಯಲ್ಲಿ ಪ್ರೀತಿ, ಜಗಳ ಎಲ್ಲವೂ ಅಂತ್ಯವಾಯಿತು.
ಹೌದು ಪತಿಯೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಹರಿಹರ ತಾಲ್ಲೂಕಿನ ಹಿಂಡಸಗಟ್ಟ ಗ್ರಾಮದಲ್ಲಿ ನಡೆದಿದೆ.
ರಂಜಿತಾ (೨೧) ಮೃತ ದುರ್ದೈವಿ. ನಾಗರಾಜ್ ನಾಯ್ಕ್ ಆರೋಪಿ. ಹೂದೋಟಕ್ಕೆ ಹೋಗಿದ್ದಾಗ ಇಬ್ಬರ ನಡುವೆ ಯಾವುದೋ ವಿಷಯಕ್ಕೆ ಜಗಳವಾಗಿದ್ದು, ಆ ಜಗಳ ವಿಕೋಪಕ್ಕೆ ತಿರುಗಿ ನಾಗರಾಜ್ ರಂಜಿತಾಳ ಕತ್ತು ಹಿಸುಕಿ ನಾಗರಾಜ್​ ಹತ್ಯೆಗೈದಿದ್ದಾನೆ. ಕೆಲವು ದಿನಗಳ ಹಿಂದಷ್ಟೇ ಇವರಿಬ್ಬರು ಪೋಷಕರ ವಿರೋಧದ ನಡುವೆ ವಿವಾಹವಾಗಿ, ಸ್ವಗ್ರಾಮದಲ್ಲಿ ವಾಸವಿದ್ದರು. ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗರಾಜ್​​ನನ್ನು ಬಂಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...