ಅದಮ್ಯ ಚೇತನ ಒಂದು ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅನ್ನ-ಅಕ್ಷರ-ಆರೋಗ್ಯ ಎಂಬ ಮೂರು ಪ್ರಮುಖ ಪ್ರಕಲ್ಪಗಳಡಿಯಲ್ಲಿ ಸೇವಾನಿರತವಾಗಿದೆ. ಬೆಂಗಳೂರಿನ ಸಂಸದರು ಮತು ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತಕುಮಾರ್ ಅವರು ತಮ್ಮ ತಾಯಿ ಗಿರಿಜಾ ಶಾಸ್ತ್ರಿಯವರ ಸ್ಮರಣಾರ್ಥ ಅದಮ್ಯ ಚೇತನ ಸಂಸ್ಥೆಯನ್ನು 1997ರಲ್ಲಿ ಸ್ಥಾಪಿಸಿದರು.
ಈ ಶೂನ್ಯ ತ್ಯಾಜ್ಯ ಅಡುಗೆ ಮನೆಯ ನಿರ್ವಹಣೆಯ ಬಗ್ಗೆ ಉಪರಾಷ್ಟ್ರಪತಿಗಳಿಗೆ ಅದಮ್ಯ ಚೇತನದ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್ ತಿಳಿಸಿಕೊಡಲಿದ್ದಾರೆ.ಬಿಸಿಯೂಟವನ್ನು ಸರಬರಾಜು ಮಾಡುತ್ತಿರುವ ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ನಾಳೆ ಭೇಟಿ ನೀಡಲಿದ್ದಾರೆ