ಮುಖ್ಯಮಂತ್ರಿಯಾದ ಬಳಿಕ ಜಗನ್ ಇದೇ ಮೊದಲ ಬಾರಿಗೆ ತಮ್ಮ ಒಡೆತನದ ಸಂಸ್ಥೆಗಳಲ್ಲಿ ಹೂಡಿಕೆ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಕೋರ್ಟ್ ಮುಂದೆ ಹಾಜರಾಗಿದ್ದು, ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ಕೋರಿ ಆಂಧ್ರ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಜ.3 ರಂದು ಸಿಬಿಐ ವಿಶೇಷ ನ್ಯಾಯಾಲಯ ತಳ್ಳಿ ಹಾಕಿ ಖುದ್ದಾಗಿ ಹಾಜರಾಗುವಂತೆ ಸೂಚಿಸಿತ್ತು.
ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರೂ ಆಗಿರುವ ಜಗನ್ಮೋಹನ್ರೆಡ್ಡಿ ಇಂದು ಬೆಳಗ್ಗೆ ಪಕ್ಷದ ರಾಜ್ಯಸಭಾ ಸದಸ್ಯ ವಿಜಯಸಾಯಿ ರೆಡ್ಡಿ ಅವರೊಂದಿಗೆ ನ್ಯಾಯಾಲಯದ ಮುಂದೆ ಹಾಜರಾದರು.