ಚಿತ್ರ ನಿರ್ಮಾಪಕ, ವಿತರಕ ಕಪಾಲಿ ಮೋಹನ್ ಆತ್ಮಹತ್ಯೆ

Date:

ಬೆಂಗಳೂರು : ಚಿತ್ರ ನಿರ್ಮಾಪಕ, ವಿತರಕರ, ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ನಗರದ ಪೀಣ್ಯ ಬಸವೇಶ್ವರ ಬಸ್​ ಟರ್ಮಿನಲ್​​ ಸಮೀಪವಿರುವ ತಮ್ಮ ಸುಪ್ರೀಂ ಹೋಟೆಲ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಹೋಟೆಲ್​ಗೆ ತೆರಳಿದ್ದ ಅವರು, ಅಲ್ಲಿಯೇ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ ಹೋಟೆಲ್ ಸಿಬ್ಬಂದಿ ಅವರನ್ನು ಎಬ್ಬಿಸಲು ಬಾಗಿಲು ತಟ್ಟಿದಾಗ ಅವರು ಬಾಗಿಲು ತೆಗೆದಿಲ್ಲ. ಆ ವೇಳೆ ಸಹಜವಾಗಿ ಅನುಮಾನಗೊಂಡು ಕಿಟಕಿ ಒಡೆದು ನೋಡಿದಾಗ ಮೋಹನ್ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಡಾ. ರಾಜ್​ಕುಮಾರ್ ಕುಟುಂಬಕ್ಕೆ ಬಹಳ ಹತ್ತಿರದವರಾಗಿದ್ದ ಮೋಹನ್ ಸಿನಿಮಾ ನಿರ್ಮಾಣ, ವಿತರಣೆಯಲ್ಲಿ ತೊಡಗಿಕೊಂಡಿದ್ದರು. ಹೋಟೆಲ್ ಉದ್ಯಮವನ್ನೂ ನಡೆಸುತ್ತಿದ್ದರು. ಈ ಹಿಂದೆ ಅವರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇವರು ಮೂಲತಃ ಉಡುಪಿ ಕುಂದಾಪುರದ ವಕ್ವಾಡಿಯವರಾಗಿದ್ದು, ಕೆಲವು ವರ್ಷಗಳಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ ಹಾಸನ: ಮಹಿಳಾ...

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ: ರಾಜ್ಯ...

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...