ಕನ್ನಡ ಚಿತ್ರರಂಗಕ್ಕೆ‌ ಕೊರೊನಾ ಹೊಡೆತ.. ಶಿವಣ್ಣಗೆ ಸ್ಯಾಂಡಲ್ ವುಡ್ ಸಾರಥ್ಯ.. ಎಲ್ಲರೂ ಒಟ್ಟಾಗಿ ‌ಸಾಗುವಂತೆ‌ ಕರುನಾಡ ಚಕ್ರವರ್ತಿ ಕರೆ..

Date:

ಕೋವಿಡ್ ೧೯ ಹೊಡೆತದಿಂದ‌ ಅನೇಕ‌ ಉದ್ಯಮಗಳು ನಷ್ಟಕ್ಕೊಳಗಾಗಿವೆ. ಇದರಿಂದ ಕನ್ನಡ ಚಿತ್ರರಂಗ ಕೂಡ‌ ಹೊರತಲ್ಲ ಕಳೆದ ಮಾರ್ಚ್‌ನಿಂದಲೂ ಕನ್ನಡ ಚಿತ್ರೋದ್ಯಮದ ಚಟುವಟಿಕೆಗಳು ಸ್ಥಗಿತಗೊಂಡಿವೆ. ಉದ್ಯಮ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳ ಬದುಕು ದುಸ್ಥರವಾಗಿದೆ. ಹೀಗಾಗಿ‌ ಚಿತ್ರರಂಗದ ‌ಸಮಸ್ಯೆಗಳ‌ ಬಗ್ಗೆ ಚರ್ಚಿಸಲೂ ನಟ‌‌ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಚಲನಚಿತ್ರ ನಿರ್ಮಾಪಕರ ಸಂಘ, ನಿರ್ದೇಶಕರ ಸಂಘದಿಂದ ಸಭೆ ನಡೆಯಿತು.

ಶಿವಣ್ಣ ನಿವಾಸದಲ್ಲಿ ‌ಕೊರೊನಾ ಪರಿಣಾಮ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ರಾಜ್‌ಕುಮಾರ್‌, ವಿಷ್ಣುವರ್ಧನ್‌ ಹಾಗೂ ಅಂಬರೀಷ್‌ ಅವರ ನಿಧನದ ಬಳಿಕ ಕನ್ನಡ ಚಿತ್ರರಂಗ ನಾಯಕತ್ವದ ಕೊರತೆ ಎದುರಿಸುತ್ತಿದೆ. ಸಂಕಷ್ಟದ ಕುಲುಮೆಯೊಳಗೆ ಬೇಯುತ್ತಿದೆ. ಸಮರ್ಥ ನಾಯಕತ್ವದ ಅಗತ್ಯವಿದೆ. ಹಾಗಾಗಿ, ಶಿವರಾಜ್‌ಕುಮಾರ್‌ ಅವರು ಚಿತ್ರರಂಗದ ನಾಯಕತ್ವ ಹೊತ್ತುಕೊಳ್ಳಬೇಕು ಎಂದು ಸಭೆಯಲ್ಲಿ ಒಮ್ಮತದಿಂದ ನಿರ್ಣಯ ಕೈಗೊಳ್ಳಲಾಯಿತು.ನಿರ್ದೇಶಕ ಎಸ್‌.ವಿ. ರಾಜೇಂದ್ರಸಿಂಗ್‌ ಬಾಬು ಮಾತನಾಡಿ, ‘ಈ ಹಿಂದೆ ಚಿತ್ರರಂಗಕ್ಕೆ ಯಾವುದೇ ಸಮಸ್ಯೆ ಎದುರಾದರೂ ಅಣ್ಣಾವ್ರ ಮನೆಯಲ್ಲಿಯೇ ಕುಳಿತು ಆ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುತ್ತಿತ್ತು. ಈಗ ಚಿತ್ರರಂಗಕ್ಕೆ ನಾಯಕನೊಬ್ಬನ ಅಗತ್ಯವಿದೆ. ಶಿವರಾಜ್‌ಕುಮಾರ್‌ ಅವರು ನಾಯಕತ್ವವಹಿಸಿಕೊಳ್ಳಬೇಕು ಎಂದು ನಾವೆಲ್ಲರೂ ಒಟ್ಟಾಗಿ ನಿರ್ಣಯಿಸಿದ್ದೇವೆ’ ಎಂದು ಘೋಷಿಸಿದರು.ಶಿವರಾಜ್‌ಕುಮಾರ್‌ ಮಾತನಾಡಿ, ‘ಪ್ರಸ್ತುತ ಕನ್ನಡ ಚಿತ್ರರಂಗ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ನಿರ್ಮಾಪಕರು, ನಿರ್ದೇಶಕರು, ಪ್ರದರ್ಶಕರು, ವಿತರಕರು ಸೇರಿದಂತೆ ಚಿತ್ರರಂಗದ ಎಲ್ಲರೂ ಒಟ್ಟಾಗಿ ಸಭೆಯಲ್ಲಿ ಪಾಲ್ಗೊಂಡಿರುವುದು ಖುಷಿ ನೀಡಿದೆ.‌ ಕೊರೊನಾ ಎದುರಿಸುವುದು ದೊಡ್ಡ ವಿಷಯವಲ್ಲ. ಎಲ್ಲಾ ಸ್ಟಾರ್‌ ನಟರೊಟ್ಟಿಗೂ ಕುಳಿತು ಮಾತನಾಡುತ್ತೇನೆ. ಕನ್ನಡ ಇಂಡಸ್ಟ್ರಿಯನ್ನು ಮಾದರಿ ಚಿತ್ರರಂಗವಾಗಿ ರೂಪಿಸಲು ಎಲ್ಲರೂ ಒಟ್ಟಾಗಿ ಸಾಗೋಣ’ ಎಂದರು.‌ಸದ್ಯದ ಸ್ಥಿತಿಯಲ್ಲಿ ಸಿನಿಮಾಗಳ ಶೂಟಿಂಗ್‌ಗೆ ಅನುಮತಿ ಸಿಕ್ಕಿದರೆ ಸಾಕಷ್ಟು ಜನರಿಗೆ ಉದ್ಯೋಗ ಸಿಗಲಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಸ್ಟಾರ್‌ ನಟರು ವರ್ಷಕ್ಕೆ ಒಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದರಿಂದ ನಿರ್ಮಾಪಕರು, ಪ್ರದರ್ಶಕರು, ವಿತರಕರು ಸಮಸ್ಯೆ ಎದುರಿಸುತ್ತಿದ್ದಾರೆ. ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿದರೆ ಉದ್ಯೋಗಾವಕಾಶ ಸಿಗಲಿದೆ. ಕನ್ನಡ ಸಿನಿಮಾಗಳಿಗೆ ಹೆಚ್ಚು ಚಿತ್ರಮಂದಿರಗಳು ಸಿಗಲಿವೆ. ಆಗ ಪರಭಾಷಾ ಸಿನಿಮಾಗಳ ಹಾವಳಿ ಕಡಿಮೆಯಾಗಲಿದೆ ಎಂದು ನಿರ್ಮಾಪಕರು ಮತ್ತು ನಿರ್ದೇಶಕರು ಒಕ್ಕೊರಲಿನಿಂದ ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಶಿವರಾಜ್‌ಕುಮಾರ್‌, ‘ರಾಜ್ಯ ಸರ್ಕಾರ ಚಿತ್ರರಂಗದ ಸಮಸ್ಯೆಗಳ ಬಗ್ಗೆ ಕೇಳುವ ಮೊದಲು ನಾವೇ ಪರಿಹಾರ ಹುಡುಕುವ ಪ್ರಯತ್ನ ಮಾಡಬೇಕು. ಬಳಿಕ ಸರ್ಕಾರದ ಮುಂದೆ ಬೇಡಿಕೆ ಮಂಡಿಸಬೇಕು’ ಎಂದರು.

ಸಭೆಯಲ್ಲಿ ನಿರ್ಮಾಪಕರ ಸಂಘದ ಅಧ್ಯಕ್ಷ ಡಿ.ಕೆ. ರಾಮಕೃಷ್ಣ, ಅಶೋಕ್‌, ಕೆ.ಪಿ. ಶ್ರೀಕಾಂತ್‌, ಎಸ್‌.ಎ. ಚಿನ್ನೇಗೌಡ, ಉಮೇಶ್‌ ಬಣಕಾರ್‌, ಎನ್‌.ಎಂ. ಸುರೇಶ್‌, ಎ. ಗಣೇಶ್‌, ಜಯಣ್ಣ, ಆರ್‌.ಎಸ್. ಗೌಡ್ರು, ಕಾರ್ತಿಕ್‌ ಗೌಡ ಹಾಜರಿದ್ದರು. ಸದ್ಯ ಕರುನಾಡ ಚಕ್ರವರ್ತಿ ಶಿವಣ್ಣ ಕನ್ನಡ ಚಿತ್ರರಂಗದ ಸಾರಥ್ಯವಹಿಸಿದ್ದಾರೆ. ಜೊತೆಗೆ ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ‌ಮುಂದೆ ತಮ್ಮ ಬೇಡಿಕೆಗಳನ್ನು ಇಡುವ ಚಿಂತನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...