ಹುಟ್ಟುಹಬ್ಬ ಆಚರಿಸಿಕೊಳ್ಳಲು ಇಚ್ಛಿಸಿದ ರೋರಿಂಗ್ ಸ್ಟಾರ್ ಹೇಳಿದ್ದೇನು?

Date:

ಸ್ಯಾಂಡಲ್‌ವುಡ್‌ನ ರೋರಿಂಗ್ ಸ್ಟಾರ್ ಶ್ರೀಮುರಳಿ ಈಗ ಜನ್ಮದಿನದ ಸಂಭ್ರಮ. ಹೌದು, ಡಿ.17ರಂದು ಅವರು ಜನ್ಮದಿನ. ಪ್ರತಿ ಬಾರಿ ಆ ದಿನ ಅವರು ಫ್ಯಾನ್ಸ್ ಜೊತೆ ಸೇರಿ ಸಂಭ್ರಮಿಸುತ್ತಿದ್ದರು. ಆದರೆ, ಈ ಬಾರಿ ಅದು ಸಾಧ್ಯವಾಗುತ್ತಿಲ್ಲ. ಕಾರಣ, ಕೊರೊನಾ! ಈ ವರ್ಷ ಅನೇಕ ಸೆಲೆಬ್ರಿಟಿಗಳು ತಮ್ಮ ಬರ್ತ್ ಡೇ ಆಚರಣೆಯನ್ನು ರದ್ದು ಮಾಡಿದ್ದರು. ಆ ಸಾಲಿಗೆ ಈಗ ನಟ ಶ್ರೀಮುರಳಿ ಕೂಡ ಸೇರಿಕೊಂಡಿದ್ದಾರೆ. ಅವರು ಕೂಡ ಈ ಬಾರಿ ಜನ್ಮದಿನ ಆಚರಣೆ ಬೇಡ ಎಂದಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು, ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ‘ಈ ಬಾರಿ ನನ್ನ ಹುಟ್ಟು ಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲು ಆಗುವುದಿಲ್ಲ. ಕಾರಣ, COVID! ನಮ್ಮಿಂದ ಬೇರೆ ಯಾರಿಗೂ ಅನಾನುಕೂಲತೆಗಳು ಆಗುವುದು ಬೇಡ. ನಾನು ಕಾರಣಾಂತರಗಳಿಂದ ಮನೆಯಲ್ಲಿ ಇರುವುದಿಲ್ಲ. ಯಾರು ಸಹಿತ ಮನೆ ಹತ್ತಿರ ಬಂದು ಬೇಸರ ಪಟ್ಟುಕೊಳ್ಳಬೇಡಿ. ಯಾವುದೇ ಹಾರ, ಕೇಕ್, ಗಿಫ್ಟ್‌ಗಳಿಗೆ ಹಣ ಖರ್ಚು ಮಾಡಬೇಡಿ. ಬದಲಾಗಿ ಹಸಿವಿರುವವರಿಗೆ ಕೈಯಲ್ಲಿ ಆದಷ್ಟು ಅನ್ನದಾನವನ್ನು ಮಾಡಿ ಎಂದು ಕೋರಿಕೊಳ್ಳುತ್ತೀನಿ. ನಮ್ಮ ಎಲ್ಲಾ ಸಂಘದ ಚಿನ್ನಗಳಿಗೆ ಈ ಮೂಲಕ ನಾನು ತಿಳಿಸುತ್ತಿದ್ದೀನಿ’ ಎಂದು ಶ್ರೀಮುರಳಿ ಹೇಳಿದ್ದಾರೆ.
ನಿಮ್ಮನ್ನು ನೊಡೋಕೆ ಆಗದೇ ಇರುವುದಕ್ಕೆ ಬೇಸರ ನನಗೂ ಇದೆ. ಹಾಗಾಗಿ ಅಭಿಮಾನಿ ದೇವರುಗಳೇ, ಆದಷ್ಟು ಬೇಗ ಎಲ್ಲವೂ ಸುಧಾರಿಸಿಕೊಂಡ ನಂತರ ಸಿಗೋಣ! ನಿಮ್ಮ ಪ್ರೀತಿ, ಅಕ್ಕರೆಯನ್ನು ನಾನು ತಿರಸ್ಕರಿಸುವುದಿಲ್ಲ. ನಿಮ್ಮ ಅಭಿಮಾನ, ಪ್ರೀತಿ, ಹಾರೈಕೆ ನನಗೆ ಇಂದು, ಎಂದೆಂದೂ ಬೇಕು. ಅದಕ್ಕೆ ನೀವು ಮಾಡಬೇಕಾಗಿರುವುದು ಏನೆಂದರೆ, ನೀವು ಇರುವ ಕಡೆಯಿಂದಲೇ ನನ್ನನ್ನು ಹಾರೈಸಿ, ಆಶೀರ್ವದಿಸಿ. ಅದೇ ನೀವು ನನಗೆ ಹುಟ್ಟು ಹಬ್ಬದಂದು ಕೊಡುವ ಬಹುದೊಡ್ಡ ಕಾಣಿಕೆ’ ಎಂದು ಶ್ರೀಮುರಳಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..?

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..? ದಸರಾ,...

ನವರಾತ್ರಿ ಎಂಟನೇ ದಿನ – ಮಹಾಗೌರಿ !

ನವರಾತ್ರಿ ಎಂಟನೇ ದಿನ – ಮಹಾಗೌರಿ ! ದೇವಿಯ ಹಿನ್ನಲೆ ನವರಾತ್ರಿಯ ಎಂಟನೇ ದಿನ...

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...