ಹೊಸದಿಲ್ಲಿ: ಭಾರತ ಸರಕಾರ ಮುಂದಿನವಾರ ಅಂದರೆ ಡಿಸೆಂಬರ್ ಅಂತ್ಯಕ್ಕೆ ಆಕ್ಸ್ಫರ್ಡ್ ಮತ್ತು ಆಸ್ಟ್ರಾಝೆನಿಕಾ ಕಂಪನಿಗಳು ಜಂಟಿಯಾಗಿ ತಯಾರಿಸಿರುವ ಕೊರೊನಾ ಲಸಿಕೆಗೆ ಅನುಮತಿ ನೀಡುವ ಸಾಧ್ಯತೆ ಇದೆ.
ಆರಂಭದಲ್ಲಿ ತುರ್ತು ಸಂದರ್ಭದಲ್ಲಿ ಬಳಸಲು ಅನುಮತಿ ನೀಡಲು ಉದ್ದೇಶಿಸಲಾಗಿದ್ದು, ನಿಯಂತ್ರಕರು ಕೇಳಿದ್ದ ಹೆಚ್ಚಿನ ಮಾಹಿತಿಯನ್ನು ಸ್ಥಳೀಯ ಉತ್ಪಾದಕರು ನೀಡಿದ್ದಾರೆ. ಹೀಗಾಗಿ ಅನುಮತಿ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.
ಒಂದೊಮ್ಮೆ ಆಕ್ಸ್ಫರ್ಡ್-ಆಸ್ಟ್ರಾಝೆನಿಕಾ ಲಸಿಕೆಗೆ ಭಾರತ ಅನುಮತಿ ನೀಡಿದಲ್ಲಿ, ಈ ಲಸಿಕೆಗೆ ಅನುಮತಿ ನೀಡಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ವಿಶೇಷವೆಂದರೆ ಬ್ರಿಟನ್ ಇನ್ನೂ ಈ ಲಸಿಕೆಗೆ ಅನುಮತಿ ನೀಡಿಲ್ಲ.
ಆಕ್ಸ್ಫರ್ಡ್ ಕೊರೊನಾ ಲಸಿಕೆಯ ಜೊತೆ ಸ್ಥಳೀಯ ಸಂಸ್ಥೆ ಭಾರತ್ ಬಯೋಟೆಕ್ ತಯಾರಿಸಿರುವ ಲಸಿಕೆಗೂ ಅನುಮತಿ ನೀಡುವ ಬಗ್ಗೆ ನಿಯಂತ್ರಕರು ಪರಿಶೀಲನೆ ನಡೆಸುತ್ತಿದ್ದಾರೆ.
ಆಕ್ಸ್ಫರ್ಡ್ ಲಸಿಕೆ ಕಡಿಮೆ ಆದಾಯದ ದೇಶಗಳ ಪಾಲಿಗೆ ವರದಾನ ಎಂದೇ ಭಾವಿಸಲಾಗಿದೆ. ಕಾರಣ ಇದು ಕಡಿಮೆ ದರಕ್ಕೆ ಲಭ್ಯವಾಗಲಿದೆ. ಜೊತೆಗೆ ಇದರ ಸಾಗಾಟ, ಸಂಗ್ರಹವೂ ಸುಲಭ.
ಭಾರತೀಯ ಔಷಧಿಗಳ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ಸಿಒ) ಡಿಸೆಂಬರ್ 9ರಂದು ಮೂರು ಕಂಪನಿಗಳಿಂದ ಅರ್ಜಿಯನ್ನು ಸ್ವೀಕರಿಸಿತ್ತು. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಮೂರೂ ಕಂಪನಿಗಳಿಗೆ ಸಂಸ್ಥೆ ಸೂಚಿಸಿತ್ತು.
ಇದರಲ್ಲಿ ಆಕ್ಸ್ಫರ್ಡ್-ಆಸ್ಟ್ರಾಝೆನಿಕಾ ಲಸಿಕೆಯ ಬಗ್ಗೆ, ದೇಶದಲ್ಲಿ ಲಸಿಕೆಯನ್ನು ಉತ್ಪಾದಿಸಲಿರುವ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಎಲ್ಲಾ ಮಾಹಿತಿಯನ್ನು ಒದಗಿಸಿದೆ. ಆದರೆ ಫೈಜರ್ ಮತ್ತು ಭಾರತ್ ಬಯೋಟೆಕ್ನಿಂದ ಲಸಿಕೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿಡಿಎಸ್ಸಿಒ ನಿರೀಕ್ಷಿಸುತ್ತಿದೆ.
ಆಕ್ಸ್ಫರ್ಡ್-ಆಸ್ಟ್ರಾಝೆನಿಕಾ ಉತ್ಪಾದಕರ ಜೊತೆ ಅಧಿಕಾರಿಗಳು ನೇರ ಸಂಪರ್ಕದಲ್ಲಿದ್ದು, ಮುಂದಿನ ವಾರ ಲಸಿಕೆಗೆ ಅನುಮತಿ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಅನುಮತಿ ಸಿಕ್ಕಿದರೆ ಲಸಿಕೆಯ ಉತ್ಪಾದನೆಗೆ ಸೆರಂ ಇನ್ಸಿಟ್ಯೂಟ್ ಸಿದ್ಧವಾಗಿದೆ. ಆರಂಭದಲ್ಲಿ 5 -6 ಕೋಟಿ ಡೋಸ್ ಲಸಿಕೆಯ ಉತ್ಪಾದನೆಗೆ ಸಂಸ್ಥೆ ಮುಂದಾಗಿದೆ.
ಭಾರತ ಸರಕಾರ ಇಲ್ಲಿಯವರೆಗೆ ಯಾವುದೇ ಲಸಿಕೆ ಉತ್ಪಾದಕ ಸಂಸ್ಥೆ ಜೊತೆಯೂ ಒಪ್ಪಂದ ಮಾಡಿಕೊಂಡಿಲ್ಲ. ಆದರೆ ಆಕ್ಸ್ಫರ್ಡ್ ಲಸಿಕೆಯ 4 ಕೋಟಿ ಡೋಸ್ಗಳನ್ನು ಸೆರಂ ಈಗಾಗಲೇ ತಯಾರಿಸಿಟ್ಟಿದ್ದು, ಜುಲೈ ವೇಳೆ 40 ಕೋಟಿ ಡೋಸ್ ಉತ್ಪಾದನೆಗೆ ಸಿದ್ಧವಾಗಿದೆ.
ಟೀಂ ಇಂಡಿಯಾಕ್ಕೆ ಗಂಭೀರ್ ಸಲಹೆ!
ಆಸ್ಟ್ರೇಲಿಯಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಭಾರತೀಯ ಕ್ರಿಕೆಟ್ ತಂಡಕ್ಕೆ ಸಲಹೆಯನ್ನು ನೀಡಿದ್ದಾರೆ. ತಂಡದ ಆಯ್ಕೆ ಯಾವ ರೀತಿ ಇದ್ದರೆ ಅನುಕೂಲವಾಗಲಿದೆ ಎಂದು ಗಂಭೀರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಮೊದಲ ಟೆಸ್ಟ್ ಪಂದ್ಯ ಸೋಲಿನ ಹಿನ್ನೆಲೆಯಲ್ಲಿ ಪ್ರಮುಖ ಬದಲಾವಣೆಯನ್ನು ಗಂಭೀರ್ ಬಯಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಹೀನಾಯವಾಗಿ ಸೋಲಿ ಕಂಡಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ಸಾಧಾರಣ ಬ್ಯಾಟಿಂಗ್ ನಡೆಸಿತ್ತಾದರೂ ಬೌಲಿಂಗ್ ವಿಭಾಗದ ಅದ್ಬುತ ಪ್ರದರ್ಶನದಿಂದಾಗಿ ಮುನ್ನಡೆಯನ್ನು ಸಾಧಿಸಿತ್ತು. ಆದರೆ ಎರಡನೇ ಇನ್ನಿಂಗ್ಸ್ ಭಾರತದ ಪಾಲಿಗೆ ಅತ್ಯಂತ ಭಯಾನಕವಾಗಿದ್ದು 36 ರನ್ಗಳಿಗೆ ಸಂಪೂರ್ಣವಾಗಿ ಕುಸಿದಿತ್ತು. ಹೀಗಾಗಿ 8 ವಿಕೆಟ್ಗಳಿಂದ ಆಸ್ಟ್ರೇಲಿಯಾ ಗೆದ್ದಿದ್ದು ಸರಣಿಯಲ್ಲಿ 1-0 ಮುನ್ನಡೆಯನ್ನು ಕಾಯ್ದುಕೊಂಡಿದೆ.
ಈ ಹಿನ್ನೆಲೆಯಲ್ಲಿ ಗೌತಮ್ ಗಂಭೀರ್ ಟೀಮ್ ಇಂಡಿಯಾಗೆ ಪ್ರಮುಖ ಸಲಹೆಯನ್ನು ನೀಡಿದ್ದು ತಂಡದ ಆಯ್ಕೆಯ ಬಗ್ಗೆ ವಿವರಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಮೆಲ್ಬೋರ್ನ್ನಲ್ಲಿ ಬಾಕ್ಸಿಂಡ್ ಡೇಯಂದು ಆರಂಭವಾಗಲಿದೆ. ಅಜಿಂಕ್ಯ ರಹಾನೆ ಮುನ್ನಡೆಸಲಿರುವ ಈ ಪಂದ್ಯಕ್ಕೆ ಭಾರತ ಐವರು ಬೌಲರ್ಗಳೊಂದಿಗೆ ಕಣಕ್ಕಿಳಿಯಲಿ ಎಂಬ ಅಭಿಪ್ರಾಯವನ್ನು ಗೌತಮ್ ಗಂಭೀರ್ ವ್ಯಕ್ತಪಡಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಪೃಥ್ವಿ ಶಾ ಪ್ರದರ್ಶನ ನೀಡಿ ಸರಣಿಯನ್ನು ಶಾ ಆರಂಭಿಸಲಿ ಎಂದು ಬಯಸಿದ್ದೆ. ಆದರೆ ಆತ ಫಾರ್ಮ್ನ ಕೊರತೆಯನ್ನು ಹೊಂದಿರುವುದಲ್ಲದೆ ಆತ್ಮವಿಶ್ವಾಸವನ್ನೂ ಕಳೆದುಕೊಂಡಿದ್ದಾನೆ. ಹೀಗಾಗಿ ಮಾಯಾಂಕ್ ಜೊತೆಗೆ ಶುಭ್ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಲಿ. ಪೂಜಾರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿ ಎಂದು ಗಂಭೀರ್ ಕ್ರಿಕೆಟ್ ಕನೆಕ್ಟೆಡ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಇನ್ನು ಇದರ ಜೊತೆಗೆ ವಿರಾಟ್ ಕೊಹ್ಲಿ ಅಲಭ್ಯತೆಯಲ್ಲಿ ಅಜಿಂಕ್ಯ ರಹಾನೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು. ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಆಡುವ ಬಳಗದಲ್ಲಿ ವೃದ್ಧಿಮಾನ್ ಸಾಹಾ ಹಾಗೂ ಹನುಮ ವಿಹಾರಿ ಬದಲಿಗೆ ಅವಕಾಶವನ್ನು ಪಡೆಯಲಿ ಎಂದು ಗಂಭೀರ್ ಹೇಳಿದ್ದಾರೆ.
ನಾಯಕ ವಿರಾಟ್ ಕೊಹ್ಲಿ ಅಲಭ್ಯತೆಯ ಕಾರಣದಿಂದಾಗಿ ತಂಡದ ಜವಾಬ್ಧಾರಿ ಹೊತ್ತಿರುವ ಅಜಿಂಕ್ಯ ರಹಾನೆ ತಮ್ಮ ಎಂದಿನ ಕ್ರಮಾಂಕವಾಗಿರುವ ಐದನೇ ಕ್ರಮಾಂಕದಲ್ಲಿ ಇಳಿಯುವ ಬದಲು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು. ಯಾಕೆಂದರೆ ನಾಯಕನಾಗಿ ರಹಾನೆ ಮುಂದೆ ನಿಂತು ಮುನ್ನಡೆಸುವಂತಿರಬೇಕು. ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿ ಎಂದು ಮಾಜಿ ಆರಂಬಿಕ ಆಟಗಾರ ಗೌತಮ್ ಗಂಭೀರ್ ಸಲಹೆಯನ್ನು ನೀಡಿದ್ದಾರೆ.






