ನಿಮ್ಮ ಸಿನೆಮಾ ಪ್ರೇಕ್ಷಕರಿಗೆ ಯಾವ ಕಾರಣಕ್ಕೆ ಇಷ್ಟವಾಗಬೇಕು ಎಂದಿದ್ದಕ್ಕೆ ಶೀತಲ್ ಶೆಟ್ಟಿ ಹೇಳಿದ್ದು ಹೀಗೆ.

Date:

ಲಾಕ್‌ಡೌನ್ ಬಳಿಕ ಬಿಡುಗಡೆಯಾದ ಸಿನೆಮಾಗಳಿಗಿಂತ ವಿಭಿನ್ನವಾದ ಜಾನರ್ ಸಿನೆಮಾ ಇದು. ಹಾಗಂತ ಇದೇ ರೀತಿಯ ಚಿತ್ರ ಎಂದು ಕೆಟಗರಿ ಮಾಡಿ ಕೂರಿಸಲಾಗದ ವೈವಿಧ್ಯತೆ ಚಿತ್ರದಲ್ಲಿದೆ. ಈ ಹಿಂದೆ ಸಿನೆಮಾಗಳಲ್ಲಿ ನೋಡಿ ಸವಕಲೆನಿಸಿದ ದೃಶ್ಯಗಳು ಇಲ್ಲಿರುವುದಿಲ್ಲ ಎಂಬ ಭರವಸೆ ನೀಡಬಲ್ಲೆ. ನಾಯಕ ನಿರೂಪ್ ಅವರು ಕೂಡ ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನವಾದ ಪಾತ್ರ ಮಾಡಿದ್ದಾರೆ. ಹಾಗಂತ ಇದು ತುಂಬ ಪ್ರಯೋಗಾತ್ಮಕ ಚಿತ್ರ ಎಂದುಕೊಳ್ಳಬಾರದು.

ಇಲ್ಲಿಯೂ ಕತೆಗೆ ಹೊಂದಿಕೊಂಡಂತೆ ಫೈಟ್ ಸನ್ನಿವೇಶಗಳು ಬಂದು ಹೋಗುತ್ತವೆ. ಖಳ ನಟ ಪಿ.ರವಿಶಂಕರ್ ಅವರು ಚಿತ್ರದಲ್ಲಿ ಒಂದು ವಿಭಿನ್ನ ಕ್ಯಾರಕ್ಟರ್ ಮೂಲಕ ಕಾಣಿಸಿಕೊಳ್ಳಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಒಳ್ಳೆಯ ಮನಸ್ಸಿನಿಂದ ಪರಿಶ್ರಮ ಹಾಕಿ ಮಾಡುವ ಕೆಲಸ ಖಂಡಿತವಾಗಿ ಎಲ್ಲರನ್ನು ತಲುಪುತ್ತದೆ ಎನ್ನುವುದು ನನ್ನ ನಂಬಿಕೆ. ಹಾಗಾಗಿ ಚಿತ್ರ ಖಂಡಿತವಾಗಿ ವೀಕ್ಷಕರಿಗೆ ಇಷ್ಟವಾಗಬಹುದೆನ್ನುವ ಭರವಸೆ ಇದೆ.ಮೊದಲನೆಯದಾಗಿ ಕತೆ ಕೇಳಿದ ನಾಯಕ ನಿರೂಪ್ ಚಿತ್ರವನ್ನು ಒಪ್ಪಿಕೊಂಡಿದ್ದು ಖುಷಿ ನೀಡಿತು. ಈ ಕತೆಯನ್ನು ನಾನು ಸುದೀಪ್ ಅವರಿಗೂ ಹೇಳಿದ್ದೆ. ಅವರು ಕೂಡ ಕತೆ ಮೆಚ್ಚಿಕೊಂಡಿದ್ದು, ಅವರ ಮೂಲಕವೇ ಜಾಕ್ ಮಂಜು ಅವರಂತಹ ಪ್ರತಿಷ್ಠಿತ ನಿರ್ಮಾಪಕರ ಪರಿಚಯವಾಯಿತು. ನಾಯಕಿಯರಾದ ಅಮೃತಾ ಅಯ್ಯಂಗಾರ್, ಸಂಜನಾ ಆನಂದ್ ಸೇರಿದಂತೆ ಒಟ್ಟು ಚಿತ್ರ ತಂಡ ನನಗೆ ಬೆನ್ನೆಲುಬಾಗಿ ನಿಂತಿದೆ. ಇಲ್ಲಿ ಮುಖ್ಯವಾಗಿ ನನ್ನ ನಿರ್ದೇಶಕರ ತಂಡ ಮತ್ತು ಸಂಕಲನಕಾರರ ಬಗ್ಗೆ ಪ್ರಸ್ತಾಪಿಸಲೇಬೇಕು.

ಬರವಣಿಗೆ ರೂಪದಲ್ಲಿದ್ದ ನನ್ನ ಕತೆಗೆ ಸಿನೆಮಾ ಕತೆಯ ರೂಪ ನೀಡುವಲ್ಲಿ ವೀರೇಶ್ ಪಾತ್ರ ಪ್ರಮುಖ. ಯೋಗರಾಜ್ ಭಟ್ ಮತ್ತು ಕವಿರಾಜ್ ಅವರ ಸಾಹಿತ್ಯಕ್ಕೆ ಅರ್ಜುನ್ ಜನ್ಯ ಅವರು ನೀಡಿರುವ ಸಂಗೀತ ಚಿತ್ರಕ್ಕೊಂದು ಶಕ್ತಿಯಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...