ಸುದೀಪ್ ಭೇಟಿಮಾಡಿ ಸಿಹಿಸುದ್ದಿ ಹಂಚಿಕೊಂಡ ಮಿಲನ ಮತ್ತು ಕೃಷ್ಣ..

Date:

ಲವ್ ಮಾಕ್ಟೈಲ್ ನಂತಹ ಸೂಪರ್ ಹಿಟ್ ಚಿತ್ರ ನೀಡಿದ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರು ಮದುವೆ ಆಗುತ್ತಿರುವ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ. ಇತ್ತೀಚೆಗಷ್ಟೇ ಈ ಜೋಡಿ ಬ್ಯಾಚುಲರ್ ಪಾರ್ಟಿ ಯನ್ನು ಸಹ ಆಯೋಜನೆ ಮಾಡಿತ್ತು. ಇನ್ನು ಫೆಬ್ರವರಿ 14ರಂದು ಪ್ರೇಮಿಗಳ ದಿನಾಚರಣೆಯ ದಿನ ಕೃಷ್ಣ ಮತ್ತು ಮಿಲನ ಜೋಡಿ ಸಪ್ತಪದಿ ತುಳಿಯಲಿದೆ.

 

 

ಮದುವೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಈ ಜೋಡಿ ಸೆಲೆಬ್ರಿಟಿಗಳನ್ನು ತಮ್ಮ ಮದುವೆಗೆ ಆಹ್ವಾನಿಸುವ ಕೆಲಸಕ್ಕೆ ಕೈ ಹಾಕಿದೆ. ನಟ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿರುವ ಕೃಷ್ಣ ಮತ್ತು ಮಿಲನ ಜೋಡಿ ಲಗ್ನಪತ್ರಿಕೆಯನ್ನು ನೀಡಿ ತಮ್ಮ ಮದುವೆಗೆ ಸುದೀಪ್ ಅವರನ್ನು ಆಹ್ವಾನಿಸಿದೆ. ಇನ್ನು ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಲವ್ ಮಾಕ್ಟೈಲ್ ಚಿತ್ರದ ನಂತರ ಲವ್ ಮಾಕ್ಟೈಲ್2 ನಲ್ಲಿ ಈ ಜೋಡಿ ಬ್ಯುಸಿ ಆಗಿದೆ. ಹಾಗೂ ನಟಿ ಮಿಲನಾ ನಾಗರಾಜ್ ಅವರು ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಗೆ ನಾಯಕಿಯಾಗಿ ಸಹ ಅಭಿನಯಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...