ಬಿಗ್ ಬಾಸ್ ಟ್ಯಾಲೆಂಟ್ ಮ್ಯಾನೇಜರ್ ಪಿಸ್ತಾ ಧಾಕಡ್ (23) ಇನ್ನಿಲ್ಲ

Date:

ಹಿಂದಿ ಬಿಗ್‌ ಬಾಸ್‌ ರಿಯಾಲಿಟಿ ಶೋನ ಟ್ಯಾಲೆಂಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ಪಿಸ್ತಾ ಧಾಕಡ್‌ ಎಂಬ ಯುವತಿ ಶುಕ್ರವಾರ (ಜ.15) ನಿಧನರಾದರು. ಮುಂಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಕೊನೆಯುಸಿರೆಳೆದರು. ಬಿಗ್‌ ಬಾಸ್‌ ಕಾರ್ಯಕ್ರಮದ ತೆರೆ ಹಿಂದೆ ಕೆಲಸ ಮಾಡುತ್ತಿದ್ದ ಅವರಿಗೆ ಕೇವಲ 23 ವರ್ಷ ವಯಸ್ಸಾಗಿತ್ತು.

ಪಿಸ್ತಾ ಧಾಕಡ್‌ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ಈ ಹಿಂದಿನ ಸೀಸನ್‌ನಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳಾದ ಶೆಹನಾಜ್‌ ಗಿಲ್‌, ಹಿಮಾಂಶಿ ಖುರಾನಾ, ಕಾಮ್ಯಾ ಪಂಜಾಬಿ, ಯುವಿಕಾ ಚೌಧರಿ ಮುಂತಾದವರು ಸೋಶಿಯಲ್‌ ಮೀಡಿಯಾ ಮೂಲಕ ಪಿಸ್ತಾ ಧಾಕಡ್‌ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ‘RIP ಪಿಸ್ತಾ… ಈಗತಾನೇ ವಿಷಯ ಗೊತ್ತಾಯಿತು. ಇನ್ನೂ ಶಾಕ್‌ನಲ್ಲಿದ್ದೇನೆ. ಬದುಕು ಅನಿಶ್ಚಿತ’ ಎಂದು ಹಿಮಾಂಶಿ ಪೋಸ್ಟ್‌ ಮಾಡಿದ್ದಾರೆ.
ಎಷ್ಟು ಖುಷಿಯಾದ, ಚೈತನ್ಯ ಭರಿತ ವ್ಯಕ್ತಿ. ನಿಮ್ಮ ಜೊತೆ ಒಡನಾಡಿದ ಎಲ್ಲರೂ ನಿಮ್ಮನ್ನು ಮಿಸ್‌ ಮಾಡಿಕೊಳ್ಳುತ್ತಾರೆ’ ಎಂದು ಶೆಹನಾಜ್‌ ಗಿಲ್‌ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ‘ನೀವೇಕೆ ನಮ್ಮನ್ನು ಇಷ್ಟು ಬೇಗ ಬಿಟ್ಟು ಹೊರಟು ಹೋದಿರಿ? ಇದನ್ನು ನಾನು ಬರೆಯುತ್ತಿದ್ದೇನೆ ಅಂತ ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ಪೋಸ್ಟ್ ಮಾಡಿದ್ದಾರೆ ಯುವಿಕಾ ಚೌಧರಿ.
ಕಳೆದ ಕೆಲವು ವರ್ಷಗಳಿಂದ ಪಿಸ್ತಾ ಧಾಕಡ್‌ ಅವರು ಬಿಗ್‌ ಬಾಸ್‌ ಕಾರ್ಯಕ್ರಮದ ಟ್ಯಾಲೆಂಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು. ‘ಖತ್ರೋಂ ಕೆ ಖಿಲಾಡಿ’, ‘ದ ವಾಯ್ಸ್‌’ ಮುಂತಾದ ರಿಯಾಲಿಟಿ ಶೋಗಳಿಗೂ ಅವರು ಕೆಲಸ ಮಾಡಿದ್ದರು. ಎಲ್ಲರ ಜೊತೆಗೂ ಅವರು ಆಪ್ತವಾಗಿ ಬೆರೆಯುತ್ತಿದ್ದರು. ಅವರು ಶುಕ್ರವಾರ (ಜ.15) ಕೆಲಸ ಮುಗಿಸಿ ಮನೆಗೆ ತೆರಳುವಾಗಿ ರಸ್ತೆ ಅಪಘಾತ ಸಂಭವಿಸಿದೆ ಎಂದು ವರದಿ ಆಗಿದೆ.

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...