ಬಿಗ್ ಬಾಸ್ ಟ್ಯಾಲೆಂಟ್ ಮ್ಯಾನೇಜರ್ ಪಿಸ್ತಾ ಧಾಕಡ್ (23) ಇನ್ನಿಲ್ಲ

Date:

ಹಿಂದಿ ಬಿಗ್‌ ಬಾಸ್‌ ರಿಯಾಲಿಟಿ ಶೋನ ಟ್ಯಾಲೆಂಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ಪಿಸ್ತಾ ಧಾಕಡ್‌ ಎಂಬ ಯುವತಿ ಶುಕ್ರವಾರ (ಜ.15) ನಿಧನರಾದರು. ಮುಂಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಕೊನೆಯುಸಿರೆಳೆದರು. ಬಿಗ್‌ ಬಾಸ್‌ ಕಾರ್ಯಕ್ರಮದ ತೆರೆ ಹಿಂದೆ ಕೆಲಸ ಮಾಡುತ್ತಿದ್ದ ಅವರಿಗೆ ಕೇವಲ 23 ವರ್ಷ ವಯಸ್ಸಾಗಿತ್ತು.

ಪಿಸ್ತಾ ಧಾಕಡ್‌ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ಈ ಹಿಂದಿನ ಸೀಸನ್‌ನಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳಾದ ಶೆಹನಾಜ್‌ ಗಿಲ್‌, ಹಿಮಾಂಶಿ ಖುರಾನಾ, ಕಾಮ್ಯಾ ಪಂಜಾಬಿ, ಯುವಿಕಾ ಚೌಧರಿ ಮುಂತಾದವರು ಸೋಶಿಯಲ್‌ ಮೀಡಿಯಾ ಮೂಲಕ ಪಿಸ್ತಾ ಧಾಕಡ್‌ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ‘RIP ಪಿಸ್ತಾ… ಈಗತಾನೇ ವಿಷಯ ಗೊತ್ತಾಯಿತು. ಇನ್ನೂ ಶಾಕ್‌ನಲ್ಲಿದ್ದೇನೆ. ಬದುಕು ಅನಿಶ್ಚಿತ’ ಎಂದು ಹಿಮಾಂಶಿ ಪೋಸ್ಟ್‌ ಮಾಡಿದ್ದಾರೆ.
ಎಷ್ಟು ಖುಷಿಯಾದ, ಚೈತನ್ಯ ಭರಿತ ವ್ಯಕ್ತಿ. ನಿಮ್ಮ ಜೊತೆ ಒಡನಾಡಿದ ಎಲ್ಲರೂ ನಿಮ್ಮನ್ನು ಮಿಸ್‌ ಮಾಡಿಕೊಳ್ಳುತ್ತಾರೆ’ ಎಂದು ಶೆಹನಾಜ್‌ ಗಿಲ್‌ ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ‘ನೀವೇಕೆ ನಮ್ಮನ್ನು ಇಷ್ಟು ಬೇಗ ಬಿಟ್ಟು ಹೊರಟು ಹೋದಿರಿ? ಇದನ್ನು ನಾನು ಬರೆಯುತ್ತಿದ್ದೇನೆ ಅಂತ ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ಪೋಸ್ಟ್ ಮಾಡಿದ್ದಾರೆ ಯುವಿಕಾ ಚೌಧರಿ.
ಕಳೆದ ಕೆಲವು ವರ್ಷಗಳಿಂದ ಪಿಸ್ತಾ ಧಾಕಡ್‌ ಅವರು ಬಿಗ್‌ ಬಾಸ್‌ ಕಾರ್ಯಕ್ರಮದ ಟ್ಯಾಲೆಂಟ್‌ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದರು. ‘ಖತ್ರೋಂ ಕೆ ಖಿಲಾಡಿ’, ‘ದ ವಾಯ್ಸ್‌’ ಮುಂತಾದ ರಿಯಾಲಿಟಿ ಶೋಗಳಿಗೂ ಅವರು ಕೆಲಸ ಮಾಡಿದ್ದರು. ಎಲ್ಲರ ಜೊತೆಗೂ ಅವರು ಆಪ್ತವಾಗಿ ಬೆರೆಯುತ್ತಿದ್ದರು. ಅವರು ಶುಕ್ರವಾರ (ಜ.15) ಕೆಲಸ ಮುಗಿಸಿ ಮನೆಗೆ ತೆರಳುವಾಗಿ ರಸ್ತೆ ಅಪಘಾತ ಸಂಭವಿಸಿದೆ ಎಂದು ವರದಿ ಆಗಿದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...