ವಾಟ್ಸ್ ಆ್ಯಪ್ ಗೆ ಸರಕಾರ ಖಡಕ್ ಎಚ್ಚರಿಕೆ..! ಏನಿದು?

Date:

ಹೊಸದಿಲ್ಲಿ: ವಿವಾದಿತ ಪ್ರೈವಸಿ ಪಾಲಿಸಿ ಅಪ್ಡೇಟ್‌ನ್ನು ಹಿಂಪಡೆಯುವಂತೆ ವಾಟ್ಸಾಪ್‌ಗೆ ಸರಕಾರ ಸೂಚಿಸಿದೆ. ಭಾರತೀಯ ಬಳಕೆದಾರರ ಮಾಹಿತಿಯ ಗೌಪ್ಯತೆ ಮತ್ತು ದತ್ತಾಂಶ ಸುರಕ್ಷತೆಯನ್ನು ಕಾಪಾಡುವಂತೆ ಸರಕಾರ ಹೇಳಿದೆ.

ಈ ನೀತಿಯನ್ನು ಫೇಸ್‌ಬುಕ್ ಒಡೆತನದ ವಾಟ್ಸಾಪ್‌ ಅನಾವರಣಗೊಳಿಸಿದ ಬಗ್ಗೆ ಸರಕಾರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದ ಬಗ್ಗೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಂಪನಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ವಾಟ್ಸಾಪ್‌ ಸಿಇಒ ವಿಲ್‌ ಕ್ಯಾಥ್‌ಕಾರ್ಟ್‌ಗೆ ಪತ್ರ ಬರೆಯಲಾಗಿದೆ. ಅಪ್ಡೇಟ್‌ ಮತ್ತು ಫೇಸ್‌ಬುಕ್‌ನೊಂದಿಗಿನ ಡೇಟಾ-ಹಂಚಿಕೆ ಭಾರತೀಯ ಬಳಕೆದಾರರನ್ನು ಹೆಚ್ಚಿನ ಭದ್ರತಾ ಅಪಾಯಗಳು ಮತ್ತು ದೋಷಗಳಿಗೆ ಒಡ್ಡುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದರ ಜತೆಗೆ, ‘ಒಂದೋ ನೀತಿಯನ್ನು ಒಪ್ಪಿಕೊಳ್ಳಿ, ಇಲ್ಲವೇ ವಾಟ್ಸಾಪ್‌ನ್ನು ತೊರೆಯಿರಿ’ ಎಂಬ ಕಂಪನಿಯ ಹಠಮಾರಿ ಧೋರಣೆಯ ಬಗ್ಗೆಯೂ ಸರಕಾರ ಅಸಮಧಾನ ವ್ಯಕ್ತಪಡಿಸಿದೆ.

 

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...