ದಿಢೀರ್ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು..!

Date:

ಮಂಡ್ಯ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೋಡು ನೋಡುತ್ತಿಂದ್ದಂತೆ ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಭೂ ವರಹನಾಥ ದೇವಾಲಯದ ರಸ್ತೆಯಲ್ಲಿ ಜರುಗಿದೆ.
ಬೆಂಗಳೂರಿನಿಂದ ಭೂ ವರಹನಾಥ ದೇವಾಲಯಕ್ಕೆ ಬರುತ್ತಿದ್ದ ವೇಳೆ ಈ ಘಟನೆ ಜರುಗಿದೆ. ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ರೈತರು ಉರುಳಿ ಕಾಳು ಒಕ್ಕಣೆ ಮಾಡುತ್ತಿದ್ದರು. ಈ ವೇಳೆ ಕಾರಿನ ಕೆಳ ಭಾಗಕ್ಕೆ ಉರುಳಿ ಸೊಪ್ಪು ಸಿಕ್ಕಿದೆ. ನಂತರ ಇಂಜಿನ್ ಹೀಟ್ ಆಗಿದ್ದ ಕಾರಣ ಸೊಪ್ಪಿನ ಮೂಲಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ.
ಕಾರಿನ ಕೆಳ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಚಾಲಕನಿಗೆ ತಿಳಿಯದ ಕಾರಣ ಕಾರನ್ನು ಚಲಿಸಿಕೊಂಡು ಮುಂದೆ ಬಂದಿದ್ದಾನೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದವರು ಚಾಲಕನಿಗೆ ಬೆಂಕಿ ಕಾಣಿಸಿಕೊಂಡಿರುವುದನ್ನು ತಿಳಿಸಿದ್ದಾರೆ. ನಂತರ ಕಾರಿನಲ್ಲಿ ಇದ್ದವರು ಎಲ್ಲರು ಕಾರಿನಿಂದ ಕೆಳಗೆ ಇಳಿದಿದ್ದಾರೆ. ಬಳಿಕ ಕಾರಿನ ಬೆಂಕಿಯನ್ನು ನಂದಿಸಲು ಸ್ಥಳೀಯರು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ, ಸಂಪೂರ್ಣವಾಗಿ ಕಾರು ಹೊತ್ತಿ ಉರಿದಿದೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ಜರುಗಿದೆ.

Share post:

Subscribe

spot_imgspot_img

Popular

More like this
Related

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್ ಅಡುಗೆ...

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ !

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ ! ದೇವಿಯ ಹಿನ್ನಲೆ ಕಾಳರಾತ್ರಿ...