Date:

ಕೋಲಾರ: ಸೇನೆಯಿಂದ ನಿವೃತ್ತಿ ಹೊಂದಿದ ಮರುದಿನವೇ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ.

ದೇಶದ ಸೇವೆ ಮುಗಿಸಿ ನಿವೃತ್ತಿಯಾಗಿ ಊರಿಗೆ ಬಂದವರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿತ್ತು. ಆದರೆ ಮರುದಿನ ಇವರ ನೆನೆಪು ಮಾತ್ರ ಉಳಿಯುವಂತಾಗಿದೆ. ಮೃತ ಮಂಜುನಾಥ್ ಅವರು ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಬಳಿಯ ಕೊಡಗುರ್ಕಿ ಗ್ರಾಮದ ನಿವಾಸಿಯಾಗಿದ್ದಾರೆ. ದೇಶದ ಗಡಿಯಲ್ಲಿ 17 ವರ್ಷಗಳ ಕಾಲ ವೀರಯೋಧನಾಗಿ ಭಾರತಾಂಬೆ ಸೇವೆ ಮಾಡಿ ತಮ್ಮ ಊರಿಗೆ ಮರಳಿದ್ದರು. ಆದರೆ ಮಂಗಳವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಜನವರಿ 31 ರಂದು ಅಂದ್ರೆ ಒಂದು ದಿನದ ಮುಂಚೆ ನಿವೃತ್ತಿಯಾಗಿದ್ದರು. ಸಾವಿರಾರು ಕನಸುಗಳನ್ನ ಹೊತ್ತು ಕುಟುಂಬದ ಜೊತೆಗೆ ಕಾಲ ಕಳೆಯಲು ಆಸೆಯನ್ನು ಹೊತ್ತು ಬಂದಿದ್ದರು. ಕೋಲಾರ ನಗರದ ಅಂಬೇಡ್ಕರ್ ನಗರದಲ್ಲಿ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಮುಂಜುನಾಥ್ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ. ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ವೀರಯೋಧ ಮಂಜುನಾಥ್ ಅವರು ಇಬ್ಬರು ಮಕ್ಕಳು, ಪತ್ನಿ, ಕುಟುಂಬ ಮತ್ತು ಅಪಾರ ಸ್ನೇಹಿತರನ್ನ ಅಗಲಿದ್ದಾರೆ.

ಜನವರಿ 31 ರಂದು ಅಂದ್ರೆ ಒಂದು ದಿನದ ಮುಂಚೆ ನಿವೃತ್ತಿಯಾಗಿದ್ದರು. ಸಾವಿರಾರು ಕನಸುಗಳನ್ನ ಹೊತ್ತು ಕುಟುಂಬದ ಜೊತೆಗೆ ಕಾಲ ಕಳೆಯಲು ಆಸೆಯನ್ನು ಹೊತ್ತು ಬಂದಿದ್ದರು. ಕೋಲಾರ ನಗರದ ಅಂಬೇಡ್ಕರ್ ನಗರದಲ್ಲಿ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಮುಂಜುನಾಥ್ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ. ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ವೀರಯೋಧ ಮಂಜುನಾಥ್ ಅವರು ಇಬ್ಬರು ಮಕ್ಕಳು, ಪತ್ನಿ, ಕುಟುಂಬ ಮತ್ತು ಅಪಾರ ಸ್ನೇಹಿತರನ್ನ ಅಗಲಿದ್ದಾರೆ.


 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...