No menu items!
16.9 C
Munich
Monday, June 15, 2026

ಸುಶಾಂತ್ ಹೆಸರಲ್ಲಿ ರಾಷ್ಟ್ರ ಪ್ರಶಸ್ತಿ – ಇದೇನು ಥ್ರಿಲ್ಲಿಂಗ್ ನ್ಯೂಸ್

Must read

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಹೆಸರಲ್ಲಿ ರಾಷ್ಟ್ರ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಪ್ಲ್ಯಾನ್‌ ಮಾಡುತ್ತಿದೆ ಎಂಬ ಮಾಹಿತಿಯೊಂದು ಈಗ ಬಿ-ಟೌನ್‌ನಲ್ಲಿ ಹರಿದಾಡುತ್ತಿದೆ. ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡ ಈ ಬಾಲಿವುಡ್‌ ನಟನ ಕುರಿತು ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರದಿಂದ ಹಲವು ವಿಭಾಗಗಳಲ್ಲಿ ಸಿನಿಮಾ ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರತಿ ವರ್ಷ ಕೊಡಲಾಗುವ ಪ್ರಶಸ್ತಿಗಳ ಜೊತೆಗೆ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಹೆಸರಿನಲ್ಲಿಯೂ ಒಂದು ಪ್ರಶಸ್ತಿಯನ್ನು ಸೇರಿಸಬೇಕು ಎಂಬ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಕೆಲವು ಕಡೆ ವರದಿ ಆಗಿದೆ. ಆದರೆ ಈ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

‘ಸುಶಾಂತ್‌ ಸಿಂಗ್‌ ರಜಪೂತ್‌ ಹೆಸರಿನಲ್ಲಿ ರಾಷ್ಟ್ರ ಪ್ರಶಸ್ತಿ ನೀಡುವ ಬಗ್ಗೆ ಪ್ರಸ್ತಾಪ ಸಲ್ಲಿಸಿದ್ದಾರೆ. ಅಂತಿಮವಾಗಿ ನಿರ್ಣಯ ಕೈಗೊಳ್ಳಲು ಒಂದಷ್ಟು ಸಮಯ ಹಿಡಿಯಬಹುದು. ಆದರೆ ಸುಶಾಂತ್‌ ಹೆಸರಿನಲ್ಲಿ ಪ್ರಶಸ್ತಿ ಆರಂಭ ಆಗುವುದು ಖಚಿತ’ ಎಂದು ಬಿಜೆಪಿ ಪಕ್ಷದವರೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಕೆಲವು ನ್ಯೂಸ್‌ ಪೋರ್ಟಲ್‌ಗಳು ಸುದ್ದಿ ಪ್ರಕಟಿಸಿವೆ. ಇದನ್ನು ಕೇಳಿ ಸುಶಾಂತ್‌ ಫ್ಯಾನ್ಸ್‌ ಖುಷಿ ಆಗಿದ್ದಾರೆ.

ಇನ್ನು, ಸುಶಾಂತ್‌ ಅವರ ಜೀವನದ ಕಥೆಯನ್ನೇ ಇಟ್ಟುಕೊಂಡು ಹೊಸ ಸಿನಿಮಾ ಕೂಡ ಅನೌನ್ಸ್‌ ಆಗಿದೆ. ಈ ಚಿತ್ರಕ್ಕೆ ‘ನ್ಯಾಯ್‌’ ಎಂದು ಶೀರ್ಷಿಕೆ ಇಡಲಾಗಿದೆ. ಪ್ರಖ್ಯಾತ ಲಾಯರ್‌ ಅಶೋಕ್‌ ಸರೋಗಿ ಅವರ ಪತ್ನಿ ಸರಳಾ ಸರೋಗಿ ಅವರು ರಾಹುಲ್‌ ಶರ್ಮಾ ಜೊತೆ ಸೇರಿ ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ದಿಲೀಪ್‌ ಗುಲಾಟಿ ನಿರ್ದೇಶನ ಮಾಡಲಿದ್ದಾರೆ. 2020ರ ಜೂನ್‌ 14ರಂದು ಸುಶಾಂತ್‌ ನಿಧನರಾದರು. ಆ ನಂತರದ ಘಟನೆಗಳನ್ನೂ ಈ ಸಿನಿಮಾ ಹೊಂದಿರಲಿದೆ ಎಂಬ ಮಾಹಿತಿ ಕೇಳಿಬಂದಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article