ಎಣ್ಣೆಗೆ ಪೀಡಿಸ್ತಿದ್ದ ತಂದೆಯನ್ನು ಕೊಂದ ಮಗ..!

Date:

ಮದ್ಯಪಾನ ಮಾಡಲು ಹಣ ನೀಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಅಬ್ಬಿಗೆರೆಯಲ್ಲಿ ಗುರುವಾರ ಸಂಜೆ ಘಟನೆ ನಡೆದಿದೆ. ಯಾದಗಿರಿ ಮೂಲದ ಹುಸೇನ್,‌ ಪುತ್ರ ಬಾಬರ್‌(29)ನನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಕೂಲಿ ಕೆಲಸ ಅರಸಿ ಕೆಲ ವರ್ಷಗಳ ಹಿಂದೆ ಹುಸೇನ್‌ ಬೆಂಗಳೂರಿಗೆ ಬಂದು, ಪತ್ನಿ, ಮಗನ ಜತೆ ವಾಸವಿದ್ದರು. ಹುಸೇನ್‌ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ. ಪುತ್ರ ಬಾಬರ್‌ ಗಾರೆ ಕೆಲಸ ಮಾಡುತ್ತಿದ್ದ. ಮದ್ಯವ್ಯಸನಿಯಾಗಿದ್ದ ಬಾಬರ್‌, ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬಂದು ಪಾಲಕರ ಜತೆ ಜಗಳ ಮಾಡುತ್ತಿದ್ದ. ಹಣ ಕೊಡು ಎಂದು ಪೀಡಿಸುತ್ತಿದ್ದ. ಸಾಕಷ್ಟು ಬಾರಿ ಬುದ್ದಿವಾದ ಹೇಳಿದ್ದರೂ ತನ್ನ ವ್ಯಸನ ಮುಂದುವರಿಸಿದ್ದ.

ಗುರುವಾರ ಸಂಜೆ ಎಂದಿನಂತೆ ಮದ್ಯಪಾನ ಮಾಡಿ ಮನೆಗೆ ಬಂದ ಬಾಬರ್‌, ಹಣ ನೀಡುವಂತೆ ಕೇಳಿದ್ದಾನೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಕೋಪದಲ್ಲಿ ಕೊಡಲಿಯ ಹಿಂಭಾಗದಿಂದ ಮಗನ ಮೇಲೆ ಹುಸೇನ್‌ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ಬಾಬರ್‌ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಹುಸೇನ್‌ನನ್ನು ಬಂಧಿಸಲಾಗಿದೆ ಎಂದು ಗಂಗಮ್ಮನಗುಡಿ ಪೊಲೀಸರು ಮಾಹಿತಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...