ಯುವ ನಿರ್ದೇಶಕರಿಗೆ ಚಾನ್ಸ್ ಕೊಡಲ್ವ ದರ್ಶನ್?

Date:

ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ನಟ ದರ್ಶನ್ ಅವರು ಯುವ ನಿರ್ದೇಶಕನೊಬ್ಬ ತಮಗೆ ಸಿನಿಮಾ ಮಾಡಲು ಕಥೆ ಮಾಡಿಕೊಂಡಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ವಿಚಾರವನ್ನ ಹಂಚಿಕೊಂಡಿದ್ದರು. ಹೀಗೆ ದರ್ಶನ್ ಅವರಿಗೆ ಸಿನಿಮಾ ಮಾಡಬೇಕೆಂದು ಆಸೆ ಇಟ್ಟುಕೊಂಡು ಬಂದಿದ್ದ ಆ ಯುವ ನಿರ್ದೇಶಕ ನಾನು ರಾಜಮೌಳಿ ಅವರ ಬಳಿ ಕೆಲಸ ಮಾಡುತ್ತಿದೆ ಎಂದು ಹೇಳಿಕೊಂಡಿದ್ದ.

 

 

ಇದಕ್ಕೆ ಉತ್ತರಿಸಿದ ದರ್ಶನ್ ಅವರು ನೀನು ನಿಜವಾಗಲೂ ರಾಜಮೌಳಿ ಅವರ ಜೊತೆ ಕೆಲಸ ಮಾಡಿದ್ದರೆ ಅವರ ಬಳಿ ನನಗೊಂದು ಕಾಲ್ ಮಾಡಿ ತದನಂತರ ನಾನು ನಿನ್ನ ನಿರ್ದೇಶನದಲ್ಲಿ ಅಭಿನಯಿಸುತ್ತೇನೆ ಎಂದು ಹೇಳಿದ್ದರು. ಹೀಗೆ ಕಥೆ ಹೇಳಲು ಬಂದ ಆ ಯುವ ನಿರ್ದೇಶಕನ ಕಥೆಯನ್ನು ಸಂಪೂರ್ಣ ಕೇಳದೆ ದರ್ಶನ್ ಅವರು ಕಳುಹಿಸಿದ್ದರಂತೆ. ಈ ವಿಷಯವನ್ನ ಸ್ವತಃ ದರ್ಶನ್ ಅವರು ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

 

 

ಇದೀಗ ಈ ವಿಷಯ ಬಹಳ ಚರ್ಚೆಗೆ ಗ್ರಾಸವಾಗಿದ್ದು ಸಿನಿಮಾ ಮಾಡುವ ಕನಸನ್ನು ಇಟ್ಟುಕೊಂಡು ಬಂದಿದ್ದ ಯುವ ನಿರ್ದೇಶಕನ ಕನಸಿಗೆ ತಣ್ಣೀರು ಎರಚಿತ್ತು ಎಷ್ಟು ಸರಿ ಎಂದು ದರ್ಶನ್ ಅವರ ವಿರುದ್ಧ ಮಾತನಾಡುತ್ತಿದ್ದಾರೆ ನೆಟ್ಟಿಗರು. ಸಿನಿಮಾ ಮಾಡಬೇಕು ಎಂದು ಕನಸು ಕಾಣುವ ಯುವ ನಿರ್ದೇಶಕರಿಗೆ ಬೆಂಬಲ ನೀಡದ ದರ್ಶನ್ ಅವರ ನಡೆ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...