ಹೈಡ್ ಮಾಡಿರುವ ವಾಟ್ಸ್ ಆ್ಯಪ್ ಸ್ಟೇಟಸ್ ನೋಡುವುದು ಹೇಗೆ?

Date:

ಫೇಸ್ಬುಕ್ ಮಾಲೀಕತ್ವದ ಜನಪ್ರಿಯ ಮೆಸೆಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಬಳಕೆದಾರರ ಸಂಖ್ಯೆ 200 ಕೋಟಿ ದಾಟಿದೆ. ಈ ಪೈಕಿ ಭಾರತ ಅತಿ ಹೆಚ್ಚು ವಾಟ್ಸ್ಆ್ಯಪ್ ಬಳಸುವ ಎರಡನೇ ದೇಶ ಎಂದು ಹೇಳಲಾಗಿದೆ. ತನ್ನ ಬಳಕೆದಾರರಿಗೆ ವಾಟ್ಸ್ಆ್ಯಪ್ ಹಲವು ಅನುಕೂಲಕರ ಫೀಚರ್ಗಳನ್ನು ಪರಿಚಯಿಸಿ ಆಕರ್ಷಿಸುತ್ತಿದೆ. ಬಳಕೆದಾರರ ಖಾಸಗಿ ತನದ ಸುರಕ್ಷತೆಗಾಗಿ ವಾಟ್ಸ್ಆ್ಯಪ್ ಹಲವು ಉಪಯುಕ್ತ ಆಯ್ಕೆಗಳನ್ನೂ ನೀಡಿದೆ.

ಈ ಪೈಕಿ ವಾಟ್ಸ್ಆ್ಯಪ್ನಲ್ಲಿ ಹಂಚಿಕೊಳ್ಳುವ ಸ್ಟೇಟಸ್ ಯಾರಿಗೆ ಬೇಕು ಅವರಿಗೆ ಮಾತ್ರ ಕಾಣಿಸುವಂತೆ ಮಾಡಬಹುದು. ಸ್ಟೇಟಸ್ ಆಯ್ಕೆಗೆ ಹೋಗಿ ಸ್ಟೇಟಸ್ ಪ್ರೈವೆಸಿಗೆ ಹೋದರೆ ನಿಮಗೆ ಬೇಕಾದ ನಂಬರ್ಗಳನ್ನು ಆಯ್ಕೆ ಮಾಡಿ ಸ್ಟೇಟಸ್ ಹಾಕಬಹುದು. ಹಾಗೆಯೇ ಬೇಡವಾದ ನಂಬರ್ಗಳನ್ನು ನಿರ್ಬಂಧಿಸಿಕೊಳ್ಳಬಹುದು. ಇದರಿಂದ ಪ್ರತಿ ಸ್ಟೇಟಸ್ ಎಲ್ಲರಿಗೂ ಕಾಣದಂತೆ ತಡೆಯಲಾಗುತ್ತದೆ.

ಹೀಗೆ ನಿಮ್ಮ ಸ್ನೇಹಿತರ ಸ್ಟೇಟಸ್ ಹೈಡ್ ಆದ ಲಿಸ್ಟ್ನಲ್ಲಿ ನೀವೂ ಇದ್ದರೆ ನಿಮಗೆ ಆ ಸ್ಟೇಟಸ್ ಕಾಣಿಸುವುದಿಲ್ಲ. ಆದರೆ, ಅವರು ನಿಮ್ಮನ್ನ ಹೈಡ್ ಮಾಡಿ ಸ್ಟೇಟಸ್ ಹಾಕಿದ್ದರೆ ಅದನ್ನು ನೋಡಬಹುದು. ಹೇಗೆ ಎಂಬುದಕ್ಕೆ ಈ ಟ್ರಿಕ್ ಬಳಸಿ.

ಇದಕ್ಕೆ ಮೊದಲು ನೀವು ಥರ್ಟ್ಪಾರ್ಟಿ ಆ್ಯಪ್ವೊಂದನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಅದೇ ಜಿಬಿ ವಾಟ್ಸ್ಆ್ಯಪ್ (GBWhatsApp). ಈ ಆ್ಯಪ್ ಅನ್ನು ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿದ ಬಳಿಕ ಆ್ಯಪ್ ಐಕಾಲ್ ಮೇಲೆ ಕ್ಲಿಕ್ ಮಾಡಿ. ಓಪನ್ ಆದ ಕೂಡಲೆ ಬಲ ಬದಿಯಲ್ಲಿರುವ ಮೂರು ಡಾಟ್ ಮೇಲೆ ಒತ್ತಿ. ಈ ಸಂದರ್ಭ ಕೆಳಗಡೆ ಹೈಡ್ ವೀವ್ ಸ್ಟೇಟಸ್ (Hide View Status) ಎಂಬ ಆಯ್ಕೆ ಕಾಣುತ್ತದೆ. ಇದನ್ನು ಒತ್ತಿದರೆ ನಿಮ್ಮನ್ನ ಹೈಡ್ ಮಾಡಿ ಸ್ಟೇಟಸ್ ಹಾಕಿದವರು ಯಾರು?, ಯಾವ ಸ್ಟೇಟಸ್ ಹಾಕಿದ್ದಾರೆ ಎಂಬುದು ಕಾಣಿಸುತ್ತದೆ. ಅಷ್ಟೇ ಅಲ್ಲದೆ ನಿಮ್ಮನ್ನ ಬ್ಲಾಕ್ ಮಾಡಿರುವವರ ಸ್ಟೇಟಸ್ ಕೂಡ ಇದರಲ್ಲಿ ನೋಡಬಹುದು.

ಆದರೆ, ಇದೊಂದು ಥರ್ಟ್ಪಾರ್ಟಿ ಆ್ಯಪ್ ಆಗಿದ್ದು ಬಳಕೆ ಮಾಡುವ ಮುನ್ನ ಎಚ್ಚರವಹಿಸಿ. ಈ ಆ್ಯಪ್ ನಿಮ್ಮ ಖಾಸಗಿ ಮಾಹಿತಿಯನ್ನು ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ.

ಹಾಗೆಯೇ ನೀವು ನಿಮ್ಮ ಕಾಂಟ್ಯಾಕ್ಟ್ನಲ್ಕಿರುವ ಸ್ನೇಹಿತರ ವಾಟ್ಸ್ಆ್ಯಪ್ ಸ್ಟೇಟಸ್ ಅನ್ನು ಅವರಿಗೆ ತಿಳಿಯದಂತೆ ವೀಕ್ಷಿಸಬಹುದಾಗಿದೆ. ಮೊದಲು ನಿಮ್ಮ ಫೋನ್ನಲ್ಲಿನ ವಾಟ್ಸ್ಆ್ಯಪ್ ಅಪ್ಲಿಕೇಶನ್ಗೆ ಹೋಗಿ ಸೆಟ್ಟಿಂಗ್ ಮೆನು ತೆರೆಯಿರಿ. ನಂತರ ಪ್ರೈವಸಿ ಸೆಟ್ಟಿಂಗ್ ಕೆಳಗೆ ಸ್ಕ್ರಾಲ್ ಮಾಡಿ. ನೀವು ಅಲ್ಲಿ ಕೆಲವು ಆಯ್ಕೆಗಳನ್ನು ನೋಡಲು ಸಾಧ್ಯವಾಗುತ್ತದೆ. ಸ್ಕ್ರೀನ್ ಕೆಳಭಾಗದಲ್ಲಿರುವ Read receipts ಆಯ್ಕೆಯನ್ನು ನಿಷ್ಕ್ರಿಯಗೊಳಿಸಿ. ಅದನ್ನು ಸಕ್ರಿಯಗೊಳಿಸಿದ ನಂತರ, ನಿಮ್ಮ ಕಾಂಟ್ಯಾಕ್ಟ್ನಲ್ಲಿರುವ ಬಳಕೆದಾರರ ವಾಟ್ಸ್ಆ್ಯಪ್ ಸ್ಟೇಟಸ್ ಅನ್ನು ನೀವು ವೀಕ್ಷಿಸಿದ್ದಿರಾ ಅಥವಾ ಇಲ್ಲವೇ ಎಂಬುದು ಅವರಿಗೆ ತಿಳಿಯುವುದಿಲ್ಲ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...