ಕಾಲೇಜಿಗೆ ಹೋಗು ಎಂದಿದ್ದಕ್ಕೆ ಆತ್ಮಹತ್ಯೆ

Date:

ಚಾಮರಾಜನಗರ: ಕಾಲೇಜಿಗೆ ಹೋಗು ಎಂದು ಪೋಷಕರು ಬಲವಂತ ಮಾಡಿದ್ದಕ್ಕೆ ಮನನೊಂದ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

ಕೊಳ್ಳೇಗಾಲದ ಮೇಗಲದೊಡ್ಡಿ ಗ್ರಾಮದ ಲೂರ್ಧಸ್ವಾಮಿ ಅವರ ಮಗಳು ದಿವ್ಯಾ(19) ಮೃತ ದುರ್ದೈವಿ. ಈಕೆ ಕಳೆದ ವರ್ಷ ಕೊರೊನಾ ಹಿನ್ನೆಲೆ ಲಾಕ್‍ಡೌನ್ ನಿಂದ ಕಾಲೇಜಿಗೆ ಹೋಗದೆ ಕೂಲಿ ಕೆಲಸ ಮಾಡಿಕೊಂಡಿದ್ದಳು. ಆದರೆ ಕಾಲೇಜು ಆರಂಭವಾದ ಬಳಿಕ ಓದಲು ಹೋಗು ಎಂದು ಪೋಷಕರು ಬಲವಂತ ಮಾಡಿ ಕಾಲೇಜಿಗೆ ಕಳುಹಿಸಿದ್ದರು. ಕಾಲೇಜಿಗೆ ಹೋಗಲು ಇಷ್ಟವಿಲ್ಲದ ಕಾರಣ ದಿವ್ಯಾ ಇಂದು ಕ್ರಿಮಿನಾಶಕವನ್ನು ಸೇವಿಸಿದ್ದಾಳೆ.

ಕ್ರಿಮಿನಾಶಕ ಕುಡಿದು ನರಳುತ್ತಿದ್ದ ಮಗಳನ್ನು ನೋಡಿದ ಪೋಷಕರು, ತಕ್ಷಣ ಕೊಳ್ಳೇಗಾಲ ಉಪ ವಿಭಾಗ ಸರ್ಕಾರಿ ಆಸ್ಪತ್ರೆಗೆ ಕರೆ ತರುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...