ಅಬ್ಬಾ….3000 ಗಡಿ ದಾಟಿದ ಕೊರೋನಾ!

Date:

ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಪ್ಪಳಿಸಿದ್ದು, ದಿನೇದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಭಾನುವಾರ ಹೊಸ ಪ್ರಕರಣಗಳ ಸಂಖ್ಯೆ 3 ಸಾವಿರ ದಾಟಿದೆ. ಬೆಂಗಳೂರು ನಗರ ಒಂದರಲ್ಲೇ 2004 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಭಾನುವಾರ ರಾಜ್ಯದಲ್ಲಿ 3082 ಹೊಸ ಪ್ರಕರಣಗಳೊಂದಿಗೆ ಇದುವರೆಗಿನ ಕೋವಿಡ್‌ ಪ್ರಕರಣಗಳ ಸಂಖ್ಯೆ 9,87,012ಕ್ಕೆ ಏರಿಕೆಯಾಗಿದೆ. ಇಂದು 1285 ಮಂದಿ ಸೋಂಕಿತರು ಸಂಫೂರ್ಣ ಗುಣವಾಗಿದ್ದಾರೆ. ಇದುವರೆಗೂ ಒಟ್ಟು 95,1452 ಮಂದಿ ಸೋಂಕಿತರು ಗುಣವಾಗಿದ್ದಾರೆ.

ಶುಕ್ರವಾರ ಕೂಡ 12 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 12, 504 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 204 ಸೋಂಕಿತರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸೋಂಕಿತರ ಪ್ರಮಾಣ ಶೇ.2.89ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ.0.38ರಷ್ಟಿದೆ.

ಭಾನುವಾರ ಒಂದೇ ದಿನ ರಾಜ್ಯಾದ್ಯಂತ 3806 ಮಂದಿಗೆ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 2457 ಮಂದಿಗೆ ಲಸಿಕೆ ನೀಡಲಾಗಿದೆ. ಜನವರಿ 16ರಿಂದ ಇದುವರೆಗೆ ರಾಜ್ಯದಲ್ಲಿ ಒಟ್ಟು 33.8 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.

ಭಾನುವಾರ ಒಂದೇ ದಿನ ರಾಜ್ಯಾದ್ಯಂತ 3806 ಮಂದಿಗೆ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 2457 ಮಂದಿಗೆ ಲಸಿಕೆ ನೀಡಲಾಗಿದೆ. ಜನವರಿ 16ರಿಂದ ಇದುವರೆಗೆ ರಾಜ್ಯದಲ್ಲಿ ಒಟ್ಟು 33.8 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.

ಬೆಂಗಳೂರಲ್ಲಿ ಕೊರೊನಾ ಸೋಂಕು ಮತ್ತೆ ಹಬ್ಬುತ್ತಿದ್ದು, ಭಾನುವಾರ ಒಂದೇ ದಿನ 2004 ಪ್ರಕರಣಗಳು ಪತ್ತೆಯಾಗಿವೆ. ಕಲಬುರಗಿ ಎರಡನೇ ಸ್ಥಾನದಲ್ಲಿದ್ದು, 159 ಪ್ರಕರಣಗಳು ದೃಪಟ್ಟಿವೆ. ಉಡುಪಿ 115, ಮೈಸೂರು 114, ದಕ್ಷಿಣ ಕನ್ನಡ 68, ಧಾರವಾಡ 60, ಹಾಸನ 65, ಬಳ್ಳಾರಿ 53, ತುಮಕೂರಲ್ಲಿ 59 ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲೂ ಸೋಕಿನ ಪ್ರಮಾಣ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...