ಮುಂಬೈನಲ್ಲಿ ‘ಕಿರಿಕ್’ ಬೆಡಗಿ ನೋಡಲು ಮುಗಿಬಿದ್ದ ಫ್ಯಾನ್ಸ್

Date:

ಮುಂಬೈ: ದಕ್ಷಿಣ ಭಾರತದ ಚೆಲುವೆ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್‍ನ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಆದರೆ ಈ ಮಧ್ಯೆ ರಶ್ಮಿಕಾ ಮುಂಬೈನ ಥಿಯೇಟರ್ ಮುಂಭಾಗ ಕಾಣಿಸಿಕೊಂಡಿದ್ದಾರೆ.

ಹೌದು, ಕಾಲಿವುಡ್ ನಟ ಕಾರ್ತಿಕ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಸುಲ್ತಾನ್ ಸಿನಿಮಾ ಶುಕ್ರವಾರ ಬಿಡುಗಡೆಯಾಗಿದೆ. ಹೀಗಾಗಿ ಸಿನಿಮಾ ವೀಕ್ಷಿಸಲು ರಶ್ಮಿಕಾ ಮುಂಬೈನ ಥಿಯೇಟರ್‍ವೊಂದಕ್ಕೆ ಬಂದಿದ್ದರು. ಈ ವೇಳೆ ರಶ್ಮಿಕಾ ಬಿಳಿ ಬಣ್ಣದ ಶರ್ಟ್ ಹಾಗೂ ಚಿಕ್ಕ ಶಾಟ್ರ್ಸ್ ತೊಟ್ಟು ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಬೇಸಿಗೆಗೆ ಸರಿ ಹೊಂದುವಂತೆ ಮತ್ತು ಡ್ರೆಸ್ ಗೆ ಮ್ಯಾಚ್ ಆಗುವಂತಹ ಬಿಳಿ ಬಣ್ಣದ ಶೂವನ್ನು ಧರಿಸಿದ್ದರು. ಜೊತೆಗೆ ಸಿನಿಮಾ ಹಾಲ್‍ಗೆ ಪ್ರವೇಶಿಸುವ ಮುನ್ನ ರಶ್ಮಿಕಾ ಫೋಟೋಗೆ ಸ್ಮೈಲ್ ಮಾಡಿ ಪೋಸ್ ನೀಡಿ ಒಳಗೆ ಹೋದರು. ಈ ವೇಳೆ ರಶ್ಮಿಕಾರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

ಸುಲ್ತಾನ್ ಸಿನಿಮಾ ಏಪ್ರಿಲ್ 2ರಂದು ಬಿಡುಗಡೆಗೊಂಡಿದ್ದು, ಸಿನಿಮಾಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ದೊರೆಯುತ್ತಿದೆ. ಇದೇ ಮೊದಲ ಬಾರಿಗೆ ರಶ್ಮಿಕಾ ಅವರು ಕಾರ್ತಿಕ್‍ಗೆ ಜೋಡಿಯಾಗಿ ಅಭಿನಯಿಸಿದ್ದು, ಸಿನಿಮಾಕ್ಕೆ ಬಕ್ಕಿಯರಾಜ್ ಕಣ್ಣನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ನೆಪೋಲಿಯನ್, ಲಾಲ್, ಯೋಗಿ ಬಾಬು ಮತ್ತು ರಾಮಚಂದ್ರ ರಾಜು ನಟಿಸಿದ್ದಾರೆ. ಜೊತೆಗೆ ವಿವೇಕ್-ಮರ್ವಿನ್ ಹಾಗೂ ಯುವನ್ ಶಂಕರ್ ರಾಜ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಸದ್ಯ ಬಾಲಿವುಡ್‍ನ 2ನೇ ಸಿನಿಮಾ ಗುಡ್ ಬಾಯ್‍ಗಾಗಿ ರಶ್ಮಿಕಾ ಮುಂಬೈನಲ್ಲಿದ್ದಾರೆ. ಗುಡ್‍ಬಾಯ್ ಸಿನಿಮಾದಲ್ಲಿ ರಶ್ಮಿಕಾ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಜೊತೆ ಸ್ಕ್ರೀನ್ ಶೇರ್ ಮಾಡಿಕೊಳ್ಳಲಿದ್ದು, ಇತ್ತೀಚೆಗೆ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ‘ಹೀಗೆ ಅಂದು ಕೊಂಡಿದ್ದು ಆಗುತ್ತಿದೆ. ಕಾತುರದಿಂದ ಕಾಯುತ್ತಿದ್ದ ನಟನೊಂದಿಗೆ ಕೊನೆಗೂ ಅಭಿನಯಿಸುತ್ತಿದ್ದೇನೆ. ನನ್ನ ಬಾಲ್ಯವನ್ನು ಅಮಿತಾಬ್ ಬಚ್ಚನ್‍ರನ್ನು ನೋಡಿಕೊಂಡು ಕಳೆದಿದ್ದೇನೆ. ಗುಡ್ ಬೈನೊಂದಿಗೆ ಹೊಸ ಪ್ರಾರಂಭವನ್ನು ಸ್ವಾಗತಿಸುತ್ತಿದ್ದೇನೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದರು.

 

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...