ವಿಜಯ್ ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳೋದು ಪಕ್ಕಾನಾ?

Date:

ಬೆಂಗಳೂರು: ಟಾಲಿವುಡ್‍ನ ಖ್ಯಾತ ನಿರ್ಮಾಪಕ ದಿಲ್ ರಾಜು ತಮಿಳಿನ ಸೂಪರ್ ಸ್ಟಾರ್ ವಿಜಯ್ ಜೊತೆಗೂಡಿ ದೊಡ್ಡ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಪ್ಲಾನ್ ಮಾಡಿದ್ದಾರೆ. ವಿಶೇಷವೆಂದರೆ ಈ ಸಿನಿಮಾವನ್ನು ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್‍ರವರನ್ನ ಕರೆತರಲು ಆಸಕ್ತಿ ಹೊಂದಿದ್ದಾರಂತೆ. ಅಲ್ಲದೆ ಈ ಸಿನಿಮಾಕ್ಕಾಗಿ ದಕ್ಷಿಣ ಭಾರತದ ಹಲವಾರು ನಟರನ್ನು ಕರೆತರಲು ಆಯೋಚನೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.

ಸಿನಿಮಾ ಕುರಿತಂತೆ ನಿರ್ಮಾಪಕ ದಿಲ್ ರಾಜು, ಪ್ರಶಾಂತ್ ನೀಲ್ ಜೊತೆ ಈಗಾಗಲೇ ಮಾತನಾಡಿರುವುದಾಗಿ ತಿಳಿಸಿದ್ದಾರೆ. ದಳಪತಿ ವಿಜಯ್ ಅಭಿನಯಿಸುತ್ತಿರುವ ಈ ಮೆಗಾ ಬಜೆಟ್ ಚಿತ್ರಕ್ಕೆ ಪ್ರತಿಭಾವಂತ ನಿದೇರ್ಶಕ ಪ್ರಶಾಂತ್ ನೀಲ್‍ರನ್ನು ಸಿನಿಮಾ ನಿರ್ದೇಶಿಸಲು ಕರೆತರಕಲು ಆಸಕ್ತಿ ಹೊಂದಿರುದಾಗಿ ಹೇಳಿಕೊಂಡಿದ್ದಾರೆ. ಸದ್ಯ ಈ ಪ್ರೊಜೆಕ್ಟ್ ಕುರಿತಂತೆ ವಿಜಯ್, ದಿಲ್ ರಾಜು ಹಾಗೂ ಪ್ರಶಾಂತ್ ನೀಲ್ ಇತ್ತೀಚೆಗೆ ಭೇಟಿಯಾಗಿದ್ದು, ಚರ್ಚೆ ನಂತರ ಮೂವರು ಪಾಸಿಟಿವ್ ರಿಯಾಕ್ಷನ್ ಹೊಂದಿದ್ದಾರೆ ಎಂದು ವರದಿಯಾಗಿದೆ.

ಈ ಹೊಸ ಪ್ರೊಜೆಕ್ಟ್ ಗೆ ಆ್ಯಕ್ಷನ್ ಕಟ್ ಹೇಳಲು ಪ್ರಶಾಂತ್ ನೀಲ್‍ರವರಿಗೆ ದಿಲ್ ರಾಜು ಹಾಗೂ ವಿಜಯ್ ಕೇಳಿಕೊಂಡಿದ್ದಾರಂತೆ. ಇದೀಗ ಪ್ರಶಾಂತ್ ನೀಲ್ ಕೆಜಿಎಫ್ ಹಾಗೂ ಸಾಲರ್ ಮೂವಿಯಲ್ಲಿ ಬ್ಯುಸಿಯಾಗಿದ್ದು, ಎಲ್ಲಾ ಒಕೆಯಾದರೆ 2023ರಲ್ಲಿ ಈ ಪ್ರಾಜೆಕ್ಟ್ ಕೈಗೆತ್ತಿಕೊಳ್ಳಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಕುರಿತಂತೆ ಮುಂದಿನ ದಿನಗಳಲ್ಲಿ ದಳಪತಿ ವಿಜಯ್‍ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಾರಾ ಇಲ್ಲವಾ ಎಂದು ಕಾದು ನೋಡಬೇಕಾಗಿದೆ.

ಸದ್ಯ ವಿಜಯ್ 65ನೇ ಸಿನಿಮಾದಲ್ಲಿ ಕಾನ್ ಏಜೆಂಟ್ ಆಗಿ ಅಭಿನಯಿಸುತ್ತಿದ್ದು, ವಿಜಯ್‍ಗೆ ಜೋಡಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಕ್ಕೆ ನಿರ್ದೇಶಕ ನೆಲ್ಸನ್ ದೀಲಿಪ್‍ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...