ಇದು ಜಾಕ್ಸನ್ ಅಲ್ಲ ಗೇಲ್!

Date:

ಚೆನ್ನೈ: ಕ್ರಿಕೆಟ್ ಪ್ರಿಯರು ಎದುರುನೋಡುತ್ತಿರುವ ಬಹು ನಿರೀಕ್ಷಿತ ಐಪಿಎಲ್ 14ನೇ ಆವೃತ್ತಿಗೆ ಇನ್ನು ಕೇವಲ 2 ದಿನ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಎಲ್ಲಾ 8 ತಂಡದ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಹಾಗೆ ತಂಡಕ್ಕಾಗಿ ಆಡಲು ಬಂದಿರುವ ವಿದೇಶಿ ಆಟಗಾರರು ಕ್ವಾರಂಟೈನ್ ಮುಗಿಸಿ ಮೈದಾನಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ಈ ನಡುವೆ ಪಂಜಾಬ್ ತಂಡದ ದೈತ್ಯ ಬ್ಯಾಟ್ಸ್ ಮ್ಯಾನ್ ಯುನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ತಮ್ಮ ಕ್ವಾರಂಟೈನ್ ಅವಧಿ ಮುಗಿದ ಸಂಭ್ರಮಕ್ಕೆ ಮೈಕಲ್ ಜಾಕ್ಸನ್ ಅವರಂತೆ ಡ್ಯಾನ್ಸ್ ಮಾಡಿ ರಂಜಿಸಿದ್ದಾರೆ.

ಪಂಜಾಬ್ ತಂಡದೊಂದಿಗೆ ಸೇರಿಕೊಂಡು ಕ್ವಾರಂಟೈನ್ ಅವಧಿಯನ್ನು ಮುಗಿಸಿರುವ ಗೇಲ್ ತಮ್ಮದೇ ಸ್ಟೈಲ್‍ನಲ್ಲಿ ಈ ಸಂಭ್ರವನ್ನು ಅಚರಿಸಿದ್ದಾರೆ ಎಂದು ಪಂಜಾಬ್ ಫ್ರಾಂಚೈಸ್ ಟ್ವಿಟ್ಟರ್‍ ನಲ್ಲಿ ಬರೆದುಕೊಂಡಿದೆ.

ಕ್ವಾರಂಟೈನ್ ಅವಧಿ ಮುಗಿದಿದೆ. ಇದೀಗ ಹೊರಬರುತ್ತಿದ್ದಾರೆ ನಿಮ್ಮೆಲ್ಲರ ಅಚ್ಚುಮೆಚ್ಚಿನ ಕ್ರಿಸ್ ಗೇಲ್ ಎಂದು ಡ್ಯಾನ್ಸ್ ಮಾಡುತ್ತಿರುವ ಗೇಲ್ ಅವರ ವೀಡಿಯೋ ಒಂದನ್ನು ಫ್ರಾಂಚೈಸ್ ಟ್ವೀಟ್ ಮಾಡಿದೆ ಈ ವೀಡಿಯೋದಲ್ಲಿ ಗೇಲ್ ಡ್ಯಾನ್ಸ್ ಮಾಸ್ಟರ್ ಮೈಕಲ್ ಜಾಕ್ಸನ್ ಅವರಂತೆ ಮೂನ್‍ವಾಕ್ ಮಾಡುತ್ತಿದ್ದು ಇದನ್ನು ಗಮನಿಸಿರುವ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ದೇಶದಾದ್ಯಂತ ಹಲವು ಅಭಿಮಾನಿಗಳನ್ನು ಹೊಂದಿರುವ ಗೇಲ್ ತಮ್ಮ ಸ್ಪೋಟಕ ಆಟದ ಮೂಲಕ ಬಿಗ್ ಸಿಕ್ಸರ್ ಹೊಡೆಯುವುದಕ್ಕೆ ಹೆಸರುವಾಸಿಯಾಗಿದ್ದಾರೆ. ಕಳೆದ ಬಾರಿಯ ಐಪಿಎಲ್‍ನಲ್ಲಿ ಪಂಜಾಬ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯದೆ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು.

14 ಆವೃತ್ತಿಗಳಲ್ಲಿ ಒಮ್ಮೆಯೂ ಪ್ರಶಸ್ತಿಯನ್ನು ಎತ್ತಿಹಿಡಿಯದ ಪಂಜಾಬ್ ತಂಡ ಈ ಬಾರಿ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದು, ಇದರಲ್ಲಿ ಗೇಲ್ ಅವರ ಆಟ ಕೂಡ ಪ್ರಮುಖವಾಗಿದೆ ಈ ಬಾರಿ ಆಸ್ಟ್ರೇಲಿಯಾದ ಬೌಲರ್ ರಿಲೆ ಮೆರೆಡಿತ್, ರಿಚಡ್ರ್ಸಸನ್ ಮತ್ತು ಟಿ20 ಕ್ರಿಕೆಟ್‍ನ ನಂಬರ್ 1 ಬ್ಯಾಟ್ಸ್ ಮ್ಯಾನ್ ಡೇವಿಡ್ ಮಲಾನ್ ಕೂಡ ತಂಡದಲ್ಲಿದ್ದಾರೆ. ಹಾಗಾಗಿ ಈ ಬಾರಿ ಪಂಜಾಬ್ ತಂಡ ಬಲಿಷ್ಠವಾಗಿದೆ.

ಪಂಜಾಬ್ ತಂಡ ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 12 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧವಾಗಿ ಆಡಲಿದೆ. ಈ ಬಾರಿ ಪಂಜಾಬ್ ತಂಡದ ಯಾವ ರೀತಿ ಉಳಿದ ತಂಡಗಳಿಗೆ ಟಕ್ಕರು ನೀಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...