ಸೋಲಿನ ಗಾಯದ ಮೇಲೆ ಧೋನಿಗೆ 12 ಲಕ್ಷ ದಂಡದ ಬರೆ

Date:

 

2021ರ ಐಪಿಎಲ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅವರಿಗೆ ಉತ್ತಮ ಆರಂಭವೇನೂ ಸಿಕ್ಕಂತೆ ಕಾಣುತ್ತಿಲ್ಲ ಒಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಮತ್ತೊಂದೆಡೆ ನಿಧಾನಗತಿಯ ಬೌಲಿಂಗ್‌ನಿಂದಾಗಿ 12 ಲಕ್ಷ ದಂಡ ಬಿದ್ದಿದೆ. ಏಪ್ರಿಲ್ 10ರ ಶನಿವಾರದಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತು.

ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 188 ರನ್ ಗಳಿಸಿದರೂ ಸಹ ಡೆಲ್ಲಿ ತಂಡ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ ಗೆಲುವು ಸಾಧಿಸಿತು. ಡೆಲ್ಲಿ ತಂಡದ ಪರ ಆರಂಭಿಕರಾಗಿ ಬಂದ ಪೃಥ್ವಿ ಶಾ ಮತ್ತು ಶಿಖರ್ ಧವನ್ 138 ರನ್‌ಗಳ ಆಡಿದ ಜತೆಯಾಟ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್‌ಗಳನ್ನು ಒತ್ತಡಕ್ಕೆ ತಳ್ಳಿತು. ಪಂದ್ಯದ ಆರಂಭದಿಂದಲೂ ಸಹ ಒತ್ತಡದಲ್ಲಿಯೇ ಬೌಲಿಂಗ್ ಮಾಡಿದ ಚೆನ್ನೈ ಬೌಲರ್‌ಗಳು ವಿಕೆಟ್ ಪಡೆಯಲು ಹರಸಾಹಸ ಪಟ್ಟರು.

2021ರ ಇಂಡಿಯನ್ ಪ್ರಿಮಿಯರ್ ಲೀಗ್ ನೀತಿಸಂಹಿತೆ ಪ್ರಕಾರ 20 ಓವರ್‌ಗಳನ್ನು 90 ನಿಮಿಷಗಳಲ್ಲಿ ಮಾಡಿ ಮುಗಿಸಬೇಕು. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕೆ ನಾಯಕ ಧೋನಿಗೆ 12 ಲಕ್ಷ ದಂಡ ವಿಧಿಸಿದ್ದು ಸೋಲಿನ ಕಾಯದ ಮೇಲೆ ದಂಡದ ಬರೆ ಎಳೆದಂತಾಗಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ತಡವಾಗಿ ಸುರಿದ ಇಬ್ಬನಿಯಿಂದಲೇ ಚೆನ್ನೈ ತಂಡದ ಬೌಲರ್‌ಗಳು ನಿಧಾನಗತಿಯ ಬೌಲಿಂಗ್ ಮಾಡಿದರು ಎನ್ನಲಾಗುತ್ತಿದೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...