ಸರಕಾರದಿಂದಲೇ ಕೋವಿಡ್ ಎರಡನೇ ಅಲೆ ಬಂದಿರೋದು ಎಂದ ಡಿಕೆಶಿ!!

Date:

ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಮಂಗಳವಾರ ರಾಜ್ಯಪಾಲ ವಜೂಭಾಯಿ ವಾಲಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಆದರೆ ಯಾವ ಆಧಾರದಲ್ಲಿ ರಾಜ್ಯಪಾಲರು ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಮಂಗಳವಾರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಆಹ್ವಾನದ ಮೇರೆ ಅವರಿಗೆ ಗೌರವ ಕೊಟ್ಟು ನಮ್ಮ ಪಕ್ಷ ಸಭೆಯಲ್ಲಿ ಭಾಗಿಯಾಗುತ್ತಿದೆ. ಸರ್ಕಾರದ ಬಳಿ ಮಾಹಿತಿ ಪಡೆದುಕೊಳ್ಳಬಹುದು. ಸರ್ವ ಪಕ್ಷಗಳ ಸಭೆಗೆ ನಮ್ಮನ್ನು ಕರೆದಿದ್ದಾರೆ. ಆದರೆ, ಸಂವಿಧಾನದ ಯಾವ ಅಡಿಯಲ್ಲಿ ಕರೆದಿದ್ದಾರೆ ಎಂದು ಗೊತ್ತಿಲ್ಲ , ಕರೆಯಬಹುದಾ ಅಂತ ಗೊತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸಿಎಂ ಅವರು ಆಸ್ಪತ್ರೆಯಲ್ಲಿ ಇದ್ದಾರೆ, ರಾಜ್ಯಪಾಲರು ಚೇರ್ ಮಾಡುತ್ತಾರೆ ಎಂದು ನಮಗೆ ನೋಟಿಸ್ ಬಂದಿದೆ. ಆದರೆ ರಾಜ್ಯಪಾಲರು ಯಾವ ನಿಯಮದ ಅಡಿಯಲ್ಲಿ ಸಭೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಇದನ್ನು ಕಾನೂನು ಸಚಿವರು ಹೇಳಬೇಕು ಎಂದರು. ಕೊರೊನಾ ಮೊದಲನೇ ಅಲೆ ಚೀನಾದಿಂದ ಬಂತು ಅಂತಾರೆ..! ಆದರೆ, ಎರಡನೇ ಅಲೆ ಸರ್ಕಾರದಿಂದಲೇ ಬಂದಿದೆ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...