ಕೊನೆಗೂ ಸಾರಿಗೆ ನೌಕರರ ಮುಷ್ಕರ ಅಂತ್ಯ

admin
1 Min Read

ಸಾರಿಗೆ ಮುಷ್ಕರ ತಾತ್ಕಾಲಿಕ ಅಂತ್ಯ ಕಂಡಿದ್ದು, ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೈಕೋರ್ಟ್‌ ಸೂಚನೆಯಂತೆ ಮುಷ್ಕರ ವಾಪಸ್ ಪಡೆದುಕೊಳ್ಳುತ್ತಿದ್ದೇವೆ ಎಂದು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್‌ ಘೋಷಿಸಿದ್ದಾರೆ.

ನ್ಯಾಯಮೂರ್ತಿಗಳ ಹೇಳಿಕೆಗೆ ಗೌರವ ಕೊಡುತ್ತೇವೆ. ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ ಎಂದಿದ್ದಾರೆ. ಜನರಿಗೆ ತೊಂದರೆ ಕೊಡಬೇಡಿ ಎಂದಿದ್ದಾರೆ. ಹೀಗಾಗಿ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.

ಈಗಾಗಲೇ ಸರಕಾರದ ಕ್ರಮಕ್ಕೆ ಬೆದರಿ ಹಾಗೂ ಮುಷ್ಕರದಲ್ಲಿ ಪಾಲ್ಗೊಳ್ಳದ ಹಲವು ಸಾರಿಗೆ ಸಂಸ್ಥೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಹಲವೆಡೆ ಒಂದಿಷ್ಟು ಬಸ್‌ಗಳು ಓಡಾಟ ನಡೆಸುತ್ತಿದ್ದವು. ಇದೀಗ ಮುಷ್ಕರ ವಾಪಸ್‌ ಪಡೆದಿರುವುದರಿಂದ ರಾಜ್ಯದಲ್ಲಿ ಎಂದಿನಂತೆ ಬಸ್‌ ಸಂಚಾರ ಮತ್ತೆ ಆರಂಭವಾಗಲಿದೆ.

ಈಗಾಗಲೇ ಸರಕಾರದ ಕ್ರಮಕ್ಕೆ ಬೆದರಿ ಹಾಗೂ ಮುಷ್ಕರದಲ್ಲಿ ಪಾಲ್ಗೊಳ್ಳದ ಹಲವು ಸಾರಿಗೆ ಸಂಸ್ಥೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಹಲವೆಡೆ ಒಂದಿಷ್ಟು ಬಸ್‌ಗಳು ಓಡಾಟ ನಡೆಸುತ್ತಿದ್ದವು. ಇದೀಗ ಮುಷ್ಕರ ವಾಪಸ್‌ ಪಡೆದಿರುವುದರಿಂದ ರಾಜ್ಯದಲ್ಲಿ ಎಂದಿನಂತೆ ಬಸ್‌ ಸಂಚಾರ ಮತ್ತೆ ಆರಂಭವಾಗಲಿದೆ.

ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನೀಡಬೇಕು ಎಂಬ ಬೇಡಿಕೆಯೂ ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯದ ಸಾರಿಗೆ ನಿಗಮಗಳ ನೌಕರರು ಏಪ್ರಿಲ್‌ 7 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಆದರೆ ಸರಕಾರ ಬೇಡಿಕೆಗೆ ಮಣಿದಿರಲಿಲ್ಲ. ಇತ್ತ ಪಟ್ಟು ಬಿಡದ ಸಾರಿಗೆ ನೌಕರರು ಮುಷ್ಕರವನ್ನೂ ಕೈಬಿಡದೆ ಸತತ 15 ದಿನಗಳಿಂದ ಪ್ರತಿಭಟನೆ ನಡೆಸಿಕೊಂಡು ಬಂದಿದ್ದರು.

Share This Article
Leave a Comment