ಎಣ್ಣೆ ಸಿಗ್ಲಿಲ್ಲ ಅಂತ ಸ್ಯಾನಿಟೈಸರ್ ಕುಡಿದು 7 ಮಂದಿ ಸಾವು

Date:

ಮುಂಬೈ: ಮದ್ಯ ಸಿಗದ್ದಕ್ಕೆ ಸ್ಯಾನಿಟೈಸರ್ ಕುಡಿದು ಏಳು ಜನರು ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆ ಮಹಾರಾಷ್ಟ್ರದ ಯವತಮಲ್ ಜಿಲ್ಲೆಯಲ್ಲಿ ನಡೆದಿದೆ. ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಏಳು ಜನರು ಸಹ ಸಾವನ್ನಪ್ಪಿದ್ದಾರೆ.

ತೆಲಿ ಫೀಲ್ ವ್ಯಾಪ್ತಿಯ ದತ್ತಾ ಲಾಂಜೇವಾರ್ ಮತ್ತು ನೂತನ್ ಸ್ಯಾನಿಟೈಸರ್ ಕುಡಿದು ಮನೆಗೆ ತೆರಳಿದ್ದರು. ರಾತ್ರಿ ಇಬ್ಬರಿಗೀ ತಲೆನೋವು ಹೆಚ್ಚಾದ ಹಿನ್ನೆಲೆ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ಸಮಯದ ಬಳಿಕ ಇಬ್ಬರ ಸಾವಾಗಿದೆ.

ಆಯತ್ ನಗರದಲ್ಲಿ ಸಂತೋಷ್ ಮೆಹ್ರಾ, ಗಣೇಶ್ ನಾಂದೇಕರ್, ಗಣೇಶ್ ಶೆಲಾರ್ ಮತ್ತು ಸುನಿಲ್ ಡೆಂಗಲೆ ಸಹ ಸ್ಯಾನಿಟೈಸರ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ.

ಮಹಾರಾಷ್ಟ್ರದಲ್ಲಿ ಲಾಕ್‍ಡೌನ್ ಘೋಷಣೆಯ ಪರಿಣಾಮ ಮದ್ಯದಂಗಡಿಗಳು ಬಂದ್ ಆಗಿವೆ. ಮದ್ಯಪಾನ ಪ್ರಿಯರು ಅಂಗಡಿಗಳತ್ತ ಹೆಜ್ಜೆ ಹಾಕಿ ನಿರಾಸೆಯಿಂದ ಹಿಂದಿರುಗುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...