ಕೋವಿಡ್ ಮಾರ್ಗಸೂಚಿಯಲ್ಲಿ ಮತ್ತೆ ಬದಲಾವಣೆ!

Date:

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್‌ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆವರೆಗೆ ಕೊರೊನಾ ಲಾಕ್‌ಡೌನ್‌ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಮತ್ತು ಒಂದಿಷ್ಟು ಬೇರೆ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿ ಏಪ್ರಿಲ್‌ 26ರಂದು ಸರಕಾರ ಮಾರ್ಗಸೂಚಿ ಹೊರಡಿಸಿತ್ತು. ಈ ಮಾರ್ಗಸೂಚಿಯಲ್ಲಿ ಮಂಗಳವಾರ ಸರಕಾರ ಅಲ್ಪ ಬದಲಾವಣೆ ಮಾಡಿತ್ತು. ಇದೀಗ ಬುಧವಾರ ಮತ್ತಷ್ಟು ಬದಲಾವಣೆ ಮಾಡಲಾಗಿದೆ.

ಈ ಹಿಂದಿನ ಮಾರ್ಗಸೂಚಿಯಲ್ಲಿ ಕೊರೊನಾ ಸುರಕ್ಷಿತ ಕ್ರಮಗಳೊಂದಿಗೆ ಕಾರ್ಯ ನಿರ್ವಹಣೆ ಮಾಡಲು, ಉತ್ಪಾದನಾ ಘಟಕಗಳು, ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿತ್ತು. ಆದರೆ ಇದರಲ್ಲಿ ಗಾರ್ಮೆಂಟ್ಸ್‌ ಘಟಕಗಳಿಗೆ ಮಾತ್ರ ಅನುಮತಿ ನೀಡಿರಲಿಲ್ಲ.

ಇದೀಗ ಮಾರ್ಗಸೂಚಿಗೆ ತಿದ್ದುಪಡಿ ತಂದಿರುವ ಸರಕಾರ, ಶೇ.50ರಷ್ಟು ಸಿಬ್ಬಂದಿಯೊಂದಿಗೆ ಗಾರ್ಮೆಂಟ್ಸ್‌ ಘಟಕಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೆ ಕೊರೊನಾ ಸುರಕ್ಷಿತ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದೆ.

ಮಂಗಳವಾರವಷ್ಟೆ ಎಪಿಎಂಸಿಗಳನ್ನು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ತೆರಯಲು ಸರಕಾರ ಅನುಮತಿ ನೀಡಿತ್ತು. ಜತೆಗೆ ಅಗತ್ಯ ವ ವಸ್ತುಗಳ ಅಂಗಡಿ ಮುಂಗಟ್ಟುಗಳೊಂದಿಗೆ ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಅಂಗಡಿಗಳನ್ನೂ ತೆರೆಯಲು ಅವಕಾಶ ಕಲ್ಪಿಸಿತ್ತು.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...