ನಾಳೆಯಿಂದ ಲಾಕ್ ಡೌನ್, ಏನಿರುತ್ತೆ? ಏನಿರಲ್ಲ?

Date:

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಕಂಟ್ರೋಲ್‍ಗೆ ಬಂದಿಲ್ಲ. ರಾಜ್ಯದಲ್ಲಿ ದಿನಕ್ಕೆ ಹೆಚ್ಚು ಕಡಿಮೆ 50 ಸಾವಿರ ಕೊರೊನಾ ಕೇಸ್ ಬರ್ತಿವೆ. ಹೀಗಾಗಿ ಸಿಎಂ ಯಡಿಯೂರಪ್ಪ ಸರ್ಕಾರ, ಈಗಿರೋ ಜನತಾ ಲಾಕ್‍ಡೌನ್ ಬದಲಿಗೆ, ನಾಳೆಯಿಂದ 14 ದಿನಗಳ ಕಾಲ ಮೇ 24ರವರೆಗೂ ಅನ್ವಯವಾಗುವಂತೆ ಟಫ್ ಲಾಕ್‍ಡೌನ್ ಜಾರಿಗೊಳಿಸುತ್ತಿದೆ.

ಬೆಳಗ್ಗೆ 6 ಗಂಟೆಯಿಂದ ಹೊಸ ಲಾಕ್‍ಡೌನ್ ಜಾರಿಯಾಗುತ್ತೆ. ಹೊಸತೇನು ಅಂದ್ರೆ ಈ ಬಾರಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗ್ತಿದೆ. ಇನ್ನುಳಿದಂತೆ ಬಹುತೇಕ ನಿಯಮಗಳೆಲ್ಲಾ ಜನತಾ ಲಾಕ್‍ಡೌನ್‍ನ ಪಾರ್ಟ್ 1ರಿಂದ ಯಥಾವತ್ತಾಗಿ ನಕಲು ಮಾಡಲಾಗಿದೆ. ಈ 14 ದಿನ ಏನಿರುತ್ತೆ? ಏನಿರಲ್ಲ? ಎಂಬುದರ ಮಾಹಿತಿ ಇಲ್ಲಿದೆ.

ಏನಿರುತ್ತೆ?: * ಆಸ್ಪತ್ರೆ, ಮೆಡಿಕಲ್, ನ್ಯಾಯಬೆಲೆ ಅಂಗಡಿ * ಹಾಲು (ಬೆಳಗ್ಗೆ 6ರಿಂದ ಸಂಜೆ 6ಗಂಟೆವರೆಗೆ) * ಹಾಪ್‍ಕಾಮ್ಸ್, ಹಣ್ಣು-ತರಕಾರಿ ಬೆಳಗ್ಗೆ 10 ಗಂಟೆವರೆಗೆ- ತಳ್ಳುಗಾಡಿಯಲ್ಲಿ ಹಣ್ಣು-ತರಕಾರಿ ಸಂಜೆ 6 ಗಂಟೆಯವರೆಗೆ ಮಾರಬಹುದು. * ದಿನಸಿ-ಮಾಂಸ (ಬೆಳಗ್ಗೆ 10 ಗಂಟೆವರೆಗೆ) * ಇಡೀ ದಿನ ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಇರುತ್ತೆ ಮತ್ತು ಹೋಂ ಡೆಲಿವರಿ * ಮದ್ಯ ಪಾರ್ಸೆಲ್ ಬೆಳಗ್ಗೆ 10 ಗಂಟೆವರೆಗೆ ಮಾತ್ರ * ಮನೆಯಲ್ಲಿ ಮಾತ್ರ ಮದುವೆ ನಡೆಯವುದು. ಮದುವೆಯಲ್ಲಿ ಕೇಬಲ 40 ಜನರಿಗಷ್ಟೇ ಭಾಗವಹಿಸಲು ಅವಕಾಶ. * ಅಂತ್ಯಸಂಸ್ಕಾರದಲ್ಲಿ 5ಕ್ಕಿಂತ ಜನರು ಭಾಗವಹಿಸುವಂತಿಲ್ಲ * ಆಹಾರ ಸಂಸ್ಕರಣಾ ಘಟಕ * ರೈಲು, ವಿಮಾನ

ಏನಿರಲ್ಲ? * ಅಂತರ್ ಜಿಲ್ಲಾ ಓಡಾಟ, ಖಾಸಗಿ ವಾಹನ ಸಂಚಾರ * ಕೆಎಸ್‍ಆರ್ ಟಿಸಿ, ಬಿಎಂಟಿಸಿ ಬಸ್, ಮೆಟ್ರೋ, ಆಟೋ, ಟ್ಯಾಕ್ಸಿ * ಗಾರ್ಮೆಂಟ್ಸ್, ಕಾರ್ಖಾನೆ, ಖಾಸಗಿ ಕಂಪನಿ * ಮಾರುಕಟ್ಟೆಗಳು

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...