‘ಕುರಿ ಪ್ರತಾಪ್ ಇನ್ನಿಲ್ಲ’ ವೈರಲ್ ಆಯ್ತು ಸುದ್ದಿ!

Date:

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳಿಗೇನೂ ಕಡಿಮೆಯಿಲ್ಲ. ಅದರಲ್ಲಿಯೂ ಕೊರೋನಾವೈರಸ್ ಹಾವಳಿ ಹೆಚ್ಚಾದಾಗಿನಿಂದ ಈ ಸುಳ್ಳು ಸುದ್ದಿಗಳ ಹಾವಳಿಯೂ ಸಹ ಹೆಚ್ಚಾಗಿಬಿಟ್ಟಿದೆ. ಇತ್ತೀಚಿಗಷ್ಟೆ ನಟ ದೊಡ್ಡಣ್ಣ ಅವರು ಮೃತಪಟ್ಟಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ್ದರು. ಇದನ್ನು ತಿಳಿದ ದೊಡ್ಡಣ್ಣ ಅವರು ವಿಡಿಯೋ ಮೂಲಕ ನಾನಿನ್ನೂ ಬದುಕಿಯೇ ಇದ್ದೇನೆ ನನಗೇನೂ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

 

 

ಇದೀಗ ದೊಡ್ಡಣ್ಣ ಅವರಿಗೆ ಮಾಡಿದ ರೀತಿಯೇ ಕುರಿ ಪ್ರತಾಪ್ ಅವರ ಕುರಿತು ಸಹ ಕಿಡಿಗೇಡಿಗಳು ಮೃತ ಸುದ್ದಿಯನ್ನು ಹಬ್ಬಿಸಿದ್ದಾರೆ. ಕುರಿ ಪ್ರತಾಪ್ ಅವರ ಆರೋಗ್ಯ ಏರುಪೇರಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದನ್ನು ಮನಗಂಡ ಕುರಿ ಪ್ರತಾಪ್ ಅವರು ಎಚ್ಚೆತ್ತು ವಿಡಿಯೋ ಮೂಲಕ ನನಗೇನು ಆಗಿಲ್ಲ ನಾನು ಚೆನ್ನಾಗಿಯೇ ಇದ್ದೇನೆ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ನೀಡಿದ್ದಾರೆ.

 

 

ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಸುದ್ದಿ ಹರಿದಾಡ್ತಿದೆ ಎಂದು ನನ್ನ ಕೆಲ ಸ್ನೇಹಿತರು ಕರೆ ಮಾಡಿ ತಿಳಿಸಿದರು ಗಾಬರಿಯಾದ ನಾನು ಈ ಸುಳ್ಳು ಸುದ್ದಿಯ ಕುರಿತು ವಿಡಿಯೋ ಮಾಡಿ ಸ್ಪಷ್ಟನೆ ನೀಡುತ್ತಿದ್ದೇನೆ. ವಿಷಯವನ್ನು ತಿಳಿಯದೆ ಈ ರೀತಿಯ ಸುದ್ದಿಗಳನ್ನು ಹಂಚಲು ಹೋಗಬೇಡಿ ಎಂದು ಕುರಿ ಪ್ರತಾಪ್ ಬೇಸರ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...