ಕೊರೊನಾಗೆ ತುಂಬು ಗರ್ಭಿಣಿ ಬಲಿ – ಮಗುವಿನ ಜೀವ ಉಳಿಸಿದ ವೈದ್ಯರು

Date:

ಬೆಂಗಳೂರು: ತುಂಬು ಗರ್ಭಿಣಿಯೊಬ್ಬರು ಕೋವಿಡ್​ ಸೋಂಕಿಗೆ ಬಲಿಯಾಗಿರುವ ಘಟನೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ನಡೆದಿದ್ದು, ಆಕೆಯ ಹೊಟ್ಟೆಯಲ್ಲಿದ್ದ ಮಗುವನ್ನು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆಯುವ ಮೂಲಕ ವೈದ್ಯರು ಕಾಪಾಡಿದ್ದಾರೆ.

ದೊಡ್ಡಬಳ್ಳಾಪುರ ಮೂಲದ ಅಶ್ವಿನಿ ಎಂಬ 8 ತಿಂಗಳ ತುಂಬು ಗರ್ಭಿಣಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಮೊದಲು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಆಕೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ದೊಡ್ಡಬಳ್ಳಾಪುರದ ಆಸ್ಪತ್ರೆ ದಾಖಲಿಸಲಾಗಿತ್ತು. ಅಲ್ಲಿಂದ ವೈದ್ಯರ ಸೂಚನೆಯಂತೆ ನಗರದ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಬೌರಿಂಗ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶ್ವಿನಿ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿದ್ದರಿಂದ, ವೈದ್ಯರು ಆಪರೇಶನ್ ಮಾಡಿ ಮಗುವನ್ನು ಹೊರತೆಗೆದಿದ್ದರು. ಇದಾದ, 3 ದಿನಗಳ ನಂತರ ಚಿಕಿತ್ಸೆ ಫಲಿಸದೆ ಅಶ್ವಿನಿ ಇಹಲೋಕ ತ್ಯಜಿಸಿದ್ದಾರೆ.

ಕೇವಲ ಹಸುಗೂಸು ಮಾತ್ರವಲ್ಲದೆ, ಮೃತ ಅಶ್ವಿನಿಯ 3 ವರ್ಷದ ಹೆಣ್ಣು ಮಗು ಕೂಡ ತಾಯಿಯನ್ನು ಕಳೆದುಕೊಂಡಿದೆ. ಇನ್ನೊಂದೆಡೆ ಹುಟ್ಟಿದ ಬಳಿಕ ತಾಯಿಯ ಜೊತೆ ಬೆಚ್ಚಗೆ ಮಲಗಬೇಕಿದ್ದ ಹಸುಗೂಸು ವೆಂಟಿಲೇಟರ್​​ನಲ್ಲಿ ಉಸಿರಾಡುತ್ತಿದೆ.

‘ನನ್ನ ಮಗಳ ಪರಿಸ್ಥಿತಿ ಯಾರಿಗೂ ಬರುವುದು ಬೇಡ. ಎಲ್ಲರೂ ಮನೆಯಲ್ಲೇ ಇರಿ, ಹೊರಗೆ ಓಡಾಡಬೇಡಿ. ಈಗಿನ ನನ್ನ ಪರಿಸ್ಥಿತಿ ಯಾವ ಶತ್ರುವಿಗೂ ಬರುವುದು ಬೇಡ’ ಎಂದು ಮಗಳನ್ನು ನೆನೆದು ಅಶ್ವಿನಿ ತಾಯಿ ಸರಸ್ವತಿ ಕಣ್ಣೀರಾದರು.

 

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...