ಕ್ಯೂ ಇದ್ರೆ ಟೋಲ್ ಕಟ್ಟುವ ಅಗತ್ಯವಿಲ್ಲ!

Date:

ವಾಹನ ಸವಾರರಿಗೆ ಗುಡ್‌ನ್ಯೂಸ್ ಇಲ್ಲಿದೆ. ಟೋಲ್ ಪ್ಲಾಜಾಗಳಲ್ಲಿ ಕ್ಯೂ ನಿಂತು ಕಿರಿಕಿರಿ ಅನುಭವಿಸುವ ಕಾಲ ದೂರವಾಗುವ ಸೂಚನೆ ಸಿಕ್ಕಿದೆ. ಇನ್ಮುಂದೆ 100 ಮೀಟರ್‌ಗಿಂತ ಹೆಚ್ಚು ದೂರ ವಾಹನಗಳ ಕ್ಯೂ ಇದ್ರೆ ಟೋಲ್ ಪ್ಲಾಜಾಗಳಲ್ಲಿ ಟೋಲ್ ಫೀ ಕಟ್ಟಬೇಕಾಗಿಲ್ಲ. ಟೋಲ್ ಪ್ಲಾಜಾಗಳಿಂದ 100 ಮೀಟರ್ ದೂರದಲ್ಲಿ ಹಳದಿ ರೇಖೆಯನ್ನು ಎಳೆದಿರಲಾಗುತ್ತದೆ. ಆ ರೇಖೆಗಿಂತಲೂ ಹೆಚ್ಚು ವಾಹನಗಳು ಕ್ಯೂನಲ್ಲಿದ್ದರೆ ಆ ವಾಹನಗಳಿಗೆ ಟೋಲ್‌ನಲ್ಲಿ ತೆರಿಗೆ ಪಾವತಿಸಬೇಕಾಗಿಲ್ಲ. ವಾಹನಗಳು ಸರಾಗವಾಗಿ ಸಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹಾಗಂದ ಮಾತ್ರಕ್ಕೆ ಈ ನಿಯಮ ಹೊಸತೇನೂ ಅಲ್ಲ. ಎರಡು ವರ್ಷಗಳ ಹಿಂದೆ ಆರ್‌ಟಿಐ ಮೂಲಕ ಕೇಳಲಾದ ಮಾಹಿತಿಯಲ್ಲಿ ಟೋಲ್ ಪ್ಲಾಜಾಗಳಲ್ಲಿ 3 ನಿಮಿಷಕ್ಕಿಂತ ಹೆಚ್ಚು ಕಾಯುವಂತಾಗಬಾರದು ಎಂಬ ನಿಯಮವಿದೆ. ಆದರೆ ಈ ನಿಯಮಗಳು ವಾಸ್ತವದಲ್ಲಿ ಜಾರಿಯಾಗಿಲ್ಲ, ಜನರಿಗೆ ಈ ಬಗ್ಗೆ ಯಾವುದೇ ಅರಿವು ಇಲ್ಲ.

ಇತ್ತೀಚೆಗಷ್ಟೇ ದೇಶಾದ್ಯಂತ ಒಂದು ವರ್ಷದೊಳಗೆ ಎಲ್ಲಾ ರಸ್ತೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈಗಿರುವ ಟೋಲ್ ಬೂತ್‌ಗಳನ್ನು ತೆಗೆದುಹಾಕಿ, ಜಿಪಿಎಸ್‌ ಮೂಲಕ ಟೋಲ್ ಸಂಗ್ರಹ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಮೂಲಕ ರಾ. ಹೆದ್ದಾರಿಗಳಲ್ಲಿ ವಾಹನ ಸಂಚಾರ ಮತ್ತಷ್ಟು ಸರಾಗಗೊಳ್ಳಲಿದೆ. 2016ರಲ್ಲಿ ಮೊದಲ ಬಾರಿಗೆ ಫಾಸ್ಟ್‌ಟ್ಯಾಗ್ ಅನ್ನು ಪರಿಚಯಿಸಲಾಯಿತು. ಆದರೆ ಫೆಬ್ರವರಿ 16, 2021 ರಿಂದ, ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳು ಎಲೆಕ್ಟ್ರಾನಿಕ್ ಟೋಲ್ ಪ್ಲಾಜಾಗಳಲ್ಲಿ ದುಪ್ಪಟ್ಟು ಟೋಲ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...