ಕೊರೊನಾ ವಾರಿಯರ್ಸ್ ಗೆ ಗೌರವಧನ ನೀಡಲು ಮುಂದಾದ ನಿಖಿಲ್

Date:

ಬೆಂಗಳೂರು: ಕೊರೊನಾ ವೈರಸ್‍ನಿಂದ ಸಂಕಷ್ಟದಲ್ಲಿರುವ ಜನರಿಗಾಗಿ ಪ್ರತಿನಿತ್ಯ ಶ್ರಮಪಟ್ಟು ಕೆಲಸ ಮಾಡುತ್ತಿರುವ ಕೊರೊನಾ ವಾರಿಯರ್ಸ್‍ಗೆ ನಟ ನಿಖಿಲ್ ಕುಮಾರ್ ಸ್ವಾಮಿ ಸಹಾಯ ಮಾಡಿದ್ದಾರೆ.

ರಾಮನಗರದ ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 430 ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರು, ಸ್ಟಾಫ್ ನರ್ಸ್‍ಗಳಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿಯವರು ಗೌರವಧನ ನೀಡಿ, ನೆಬ್ಯುಲೈಜೇಷನ್ ಮೆಷಿನ್ ವಿತರಿಸುವ ಮೂಲಕ ನೆರವು ನೀಡಿದ್ದಾರೆ.

ಇತ್ತೀಚೆಗೆ ಲಾಕ್‍ಡೌನ್ ವೇಳೆ ನಿಖಿಲ್ ಕುಮಾರಸ್ವಾಮಿಯವರು ರಾಮನಗರದಲ್ಲಿರುವ ತಮ್ಮ ಜಮೀನಿನಲ್ಲಿ ಕೃಷಿ ಮಾಡುವ ಮೂಲಕ ಗಮನ ಸೆಳೆದಿದ್ದರು. ಕೆಲವು ದಿನಗಳ ಹಿಂದೆ ನಿಖಿಲ್ ಕುಮಾರ್ ಸ್ವಾಮಿ ಹಾಗೂ ಅವರ ತಂದೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರಿಗೆ ಕೊರೊನಾ ಸೋಂಕು ಧೃಡಪಟ್ಟಿತ್ತು. ಇದೀಗ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸದ್ಯ ನಿಖಿಲ್ ಕುಮಾರಸ್ವಾಮಿ ಸೀತಾರಾಮ ಕಲ್ಯಾಣ ಸಿನಿಮಾದ ನಂತರ ರೈಡರ್ ಸಿನಿಮಾದಲ್ಲಿ ಅಭಿನಯಿಸಿದ್ದು, ಸಿನಿಮಾದ ಬಹುತೇಕ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಪ್ರತಿ ಚಿತ್ರದಲ್ಲಿ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ಮೋಡಿ ಮಾಡುವ ನಿಖಿಲ್ ಈ ಚಿತ್ರದಲ್ಲಿ ಹೇಗೆ ನಟಿಸಿದ್ದಾರೆ ಎಂದು ಕಾದು ನೋಡಬೇಕಾಗಿದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...