ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 3 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಕೊಡಗು, ಮೈಸೂರು, ಮಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಮಳೆಯಾಗಲಿದೆ. ರಾಜ್ಯದಲ್ಲಿ ಈ ಸಾಲಿನ ಮುಂಗಾರು ಮಳೆ ಇಂದಿನಿಂದ ರಾಜ್ಯಾದ್ಯಂತ ತೀವ್ರವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್ ನಿಂದ ಸೆಪ್ಟೆಂಬರ್ ವರೆಗಿನ ನಾಲ್ಕು ತಿಂಗಳ ಮುಂಗಾರು ಸಾಲಿನಲ್ಲಿ ಭಾರತದಲ್ಲಿ ಶೇ. 70ರಷ್ಟು ಮಳೆಯಾಗುತ್ತದೆ. ಇದು ಅಕ್ಕಿ, ಸೋಯಾಬೀನ್, ಹತ್ತಿ ಬೆಳೆಗೆ ನಿರ್ಣಾಯಕವಾಗಿರುತ್ತದೆ. ಕಳೆದ ಎರಡು ವರ್ಷಗಳಿಂದ ಇದು ಉತ್ತಮವಾಗಿದೆ. ಕೊವಿಡ್ ಸೋಂಕು ಕಾಲದಲ್ಲೂ ಕಳೆದ ವರ್ಷ ಉತ್ತಮ ಮಳೆಯಾಗಿ ರೈತಾಪಿ ರ್ಗಕ್ಕೆ ಆಶಾದಾಯಕವಾಗಿತ್ತು. ರೈತರು ಈ ಬಾರಿಯೂ ಇದೇ ನಿರೀಕ್ಷೆಯಲ್ಲಿದ್ದಾರೆ.






