ತ. ನಾಡು ಮಾತ್ರವಲ್ಲ ಪುದುಚೇರಿಯಿಂದಲೂ ಮೇಕೆದಾಟಿಗೆ ಅಡ್ಡಿ

Date:

ತಮಿಳುನಾಡಿನ ನಂತರ ಇದೀಗ ಪುದುಚೇರಿ, ಮೇಕೆದಾಟುವಿನಲ್ಲಿ ಕರ್ನಾಟಕ ರಾಜ್ಯ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ.

ಮೇಕೆದಾಟು ವಿಚಾರದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡುವಂತೆ ಮನವಿ ಮಾಡಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವುದಾಗಿ ಪುದುಚೇರಿ ಸಿಎಂ ಎನ್. ರಂಗಸಾಮಿ ತಿಳಿಸಿದ್ದಾರೆ.

ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕಕ್ಕೆ ಅನುಮತಿ ನೀಡದಂತೆ ಪತ್ರದಲ್ಲಿ ಕೋರಿರುವುದಾಗಿ ತಿಳಿದುಬಂದಿದೆ. ಬುಧವಾರ ಸಿಎಂ ರಂಗಸಾಮಿ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದ್ದು, ಸಭೆ ನಂತರ ಪತ್ರ ಬರೆದಿರುವುದಾಗಿ ತಿಳಿದುಬಂದಿದೆ.

 

ಕರ್ನಾಟಕ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಿದರೆ ಪುದುಚೇರಿಯ ಕಾರೈಕಲ್ ಪ್ರದೇಶದ ಮೇಲೆ ಪರಿಣಾಮ ಬೀರಲಿದೆ ಎಂದು ರಂಗಸಾಮಿ ತಿಳಿಸಿದ್ದಾರೆ. “ಕಾರೈಕಲ್ ಪ್ರದೇಶದಲ್ಲಿ ಈ ಯೋಜನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇಲ್ಲಿನ ಕೃಷಿ ಚಟುವಟಿಕೆ, ಕುಡಿಯುವ ನೀರಿಗೂ ಹೊಡೆತ ಬೀಳಲಿದೆ” ಎಂದು ಹೇಳಿದ್ದಾರೆ.

ಕುಡಿಯುವ ನೀರಿನ ಉದ್ದೇಶದ ಮೇಕೆದಾಟು ಯೋಜನೆಗೆ ಸಂಬಂಧಿಸಿದ ಕರ್ನಾಟಕದ ಪ್ರಸ್ತಾವನೆಗೆ ನ್ಯಾಯ ಒದಗಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭರವಸೆ ನೀಡಿದ್ದರು.

ಈ ನಡುವೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಮಿಳುನಾಡು ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್, “ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ತೀರ್ಪಿನ ವಿರುದ್ಧ ಅಣೆಕಟ್ಟು ನಿರ್ಮಿಸುವುದಾಗಿ ಹೇಳುವ ಹಕ್ಕು ಕರ್ನಾಟಕಕ್ಕೆ ಇದ್ದರೆ, ಕಾನೂನು ಮಾರ್ಗದ ಮೂಲಕ ಯೋಜನೆ ಸ್ಥಗಿತಗೊಳಿಸುವ ಹಕ್ಕು ನಮಗೂ ಇದೆ” ಎಂದು ಹೇಳಿದ್ದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...