ರಾಹುಲ್ ದ್ರಾವಿಡ್ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ ಸಂಜು ಸ್ಯಾಮ್ಸನ್

Date:

ರಾಹುಲ್ ದ್ರಾವಿಡ್ ಶ್ರೀಲಂಕಾಗೆ ತೆರಳಿರುವ ಭಾರತ ತಂಡದ ಕೋಚ್ ಆಗಿರುವ ಬಗ್ಗೆ ಸಾಕಷ್ಟು ಯುವ ಆಟಗಾರರು ತಮ್ಮ ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ. ಯುವ ಕ್ರಿಕೆಟಿಗ ಕೇರಳ ಮೂಲದ ಸಂಜು ಸ್ಯಾಮ್ಸನ್ ಕೂಡ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನ ದೊರೆತಿರುವ ಬಗ್ಗೆ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್‌ನ ‘ಫಾಲೋ ದಿ ಬ್ಲ್ಯೂಸ್’ ವಿಶೇಷ ಕಾರ್ಯಕ್ರಮದಲ್ಲಿ ಸಂಜು ಸ್ಯಾಮ್ಸನ್ ಕೋಚ್ ರಾಹುಲ್ ದ್ರಾವಿಡ್ ಬಗ್ಗೆ ಮಾತನಾಡಿದರು.

 

“ಭಾರತ ಎ ತಂಡ ಅಥವಾ ಅಂಡರ್ 19 ತಂಡದ ಪ್ರತಿಯೊಬ್ಬ ಆಟಗಾರರು ಕೂಡ ಅದೃಷ್ಟವಶಾತ್ ರಾಹುಲ್ ದ್ರಾವಿಡ್ ಎಂಬ ವ್ಯಕ್ತಿಯ ಮಾರ್ಗದರ್ಶನದಲ್ಲಿ ಸಾಗಿ ಬರಬೇಕಿದೆ. ನಾವು ನಮ್ಮ ಕ್ರಿಕೆಟ್ ಪಾಠಗಳನ್ನು ರಾಹುಲ್ ದ್ರಾವಿಡ್ ಅವರಿಂದ ಕಲಿಯಲು ಅದೃಷ್ಟ ಮಾಡಿದ್ದೇವೆ” ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಅವರಿಂದ ಆಡಲು ಆಹ್ವಾನ ಪಡೆದ ಕ್ಷಣವನ್ನು ಸಂಜು ಸ್ಮರಿಸಿಕೊಂಡಿದ್ದಾರೆ. “ನನಗಿನ್ನೂ ನೆನಪಿದೆ, ರಾಜಸ್ಥಾನ್ ರಾಯಲ್ಸ್ ತಂಡದ ಟ್ರಯಲ್ಸ್‌ಗೆ ನಾನು ಹೋಗಿದ್ದೆ. ಆ ದಿನ ನಾನು ನಿಜಕ್ಕೂ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದೆ. ನಂತರ ರಾಹುಲ್ ದ್ರಾವಿಡ್ ಅವರು ನನ್ನ ಬಳಿಗೆ ಬಂದು ನಮ್ಮ ತಂಡದ ಪರವಾಗಿ ಆಡುತ್ತೀಯಾ ಎಂದು ಕೇಳಿದ್ದರು. ಅದು ನನ್ನ ಜೀವನದ ಅತ್ಯಂತ ದೊಡ್ಡ ಕ್ಷಣವಾಗಿದೆ. ಅದನ್ನು ನಾನು ಮರೆಯಲು ಸಾಧ್ಯವಿಲ್ಲ. ಅದು ಅವರು ಶ್ರೇಷ್ಠತೆಯಾಗಿದೆ. ಅವರ ಇರುವಿಕೆಯನ್ನು ನಾನು ಯಾವಾಗಲೂ ಆನಂದಿಸುತ್ತೇನೆ” ಎಂದು ಸಂಜು ಸ್ಯಾಮ್ಸನ್ ವಿವರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...