ಬಲೆಗೆ ಬಿತ್ತು ಬರೋಬ್ಬರಿ 19 ಕೆಜಿ ತೂಕದ ಮೀನು

Date:

ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ವೇಳೆ ಸೋಮವಾರ ಬರೋಬ್ಬರಿ 19 ಕೆ.ಜಿ ತೂಕದ ಕುರುಡೆ ಮೀನು ಏಂಡಿ ಬಲೆಗೆ ಬಿದ್ದಿದೆ.

ಕಾರವಾರ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಈ ಅವಧಿಯಲ್ಲಿ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಸೃಷ್ಟಿಯಾಗುತ್ತಿದ್ದರಿಂದ ಸಾಂಪ್ರದಾಯಿಕ ಮೀನುಗಾರಿಕೆಗೂ ಸಹ ನಿಷೇಧ ಹೇರಿದ್ದರಿಂದಾಗಿ ಯಾವುದೇ ದೋಣಿಗಳು ಸಮುದ್ರಕ್ಕೆ ಇಳಿಯುತ್ತಿಲ್ಲ.

ಆದರೆ ಸೋಮವಾರ ಮಳೆ ಕೊಂಚ ವಿರಾಮ ನೀಡಿದ ವೇಳೆಯಲ್ಲಿ ಸ್ಥಳೀಯ ಮೀನುಗಾರರು ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದರು. ದಡದಲ್ಲಿಯೇ ನಿಂತು ಬೀಸುವ ಏಂಡಿ ಬಲೆ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬಲೆಗೆ ಭಾರೀ ಗಾತ್ರದ ಕುರುಡೆ ಮೀನು ಸಿಲುಕಿದೆ.

ಬಲೆಗೆ ಸಿಲುಕಿದ ಮೀನು ಬರೋಬ್ಬರಿ 18 ಕೆ.ಜಿ 710 ಗ್ರಾಂ ತೂಕವಿದ್ದು, ಬಲೆ ಬೀಸಿದ ಮೀನುಗಾರರು ಫುಲ್ ಖುಷ್ ಆಗಿದ್ದಾರೆ. ಈ ಮೀನು ಹಿಡಿಯುತ್ತಿದ್ದಂತೆ ಅದನ್ನು ಗಮನಿಸಿದವರು ಕೆ.ಜಿಗೆ 600 ರೂಪಾಯಿ ಮೊತ್ತದಲ್ಲಿ ಒಟ್ಟೂ 8 ಸಾವಿರ ರೂಪಾಯಿ ನೀಡಿ ಖರೀದಿ ಮಾಡಿದ್ದಾರೆ.

ಸಾಮಾನ್ಯವಾಗಿ ಕುರುಡೆ ಮೀನು 20 ರಿಂದ 25 ಕೆ.ಜಿ ವರೆಗೂ ಬೆಳವಣಿಗೆ ಹೊಂದುತ್ತದೆ. ಆದರೆ ದಡದಲ್ಲಿ ಇಷ್ಟು ದೊಡ್ಡ ಪ್ರಮಾಣದ ಮೀನು ಬಲೆಗೆ ಬೀಳುವುದು ಅಪರೂಪವಾಗಿದೆ

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...