ಡಿಕೆಶಿ ತವರೂರಲ್ಲಿ ಕಾಂಗ್ರೆಸ್ ಒಳಜಗಳ

Date:

ಕೆಪಿಸಿಸಿ ಸಾರಥಿ ಡಿ.ಕೆ. ಶಿವಕುಮಾರ್ ತವರು ಜಿಲ್ಲೆ ರಾಮನಗರ ಕಾಂಗ್ರೆಸ್ ಮುಖಂಡರ ಒಳ ಜಗಳ ಬೀದಿಗೆ ಬಂದಿದೆ. ಅದರಲ್ಲೂ ಡಿಕೆ ಸಹೋದರರ ಅಪ್ತ ಹಾಗೂ ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಅವರನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಪರಾಜಿತ ಅಭ್ಯರ್ಥಿಗಳು ಆಗ್ರಹಿಸಿದರು.

ರಾಮನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ 2ನೇ ವಾರ್ಡ್‍ನ ಪರಾಜಿತ ಅಭ್ಯರ್ಥಿ ಶಿವಕುಮಾರಸ್ವಾಮಿ, 23ನೇ ವಾರ್ಡ್‍ನ ಪ್ಯಾರಿ ಫಯಾಜ್ ಹಾಗೂ 24ನೇ ವಾರ್ಡ್ ಅಭ್ಯರ್ಥಿ ಸಯೀದಾ ಬಾನು ಪತಿ ಫಯಾಜ್ ಪಾಷಾ ಪಕ್ಷ ವಿರೋಧಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ದೆಹಲಿವರೆಗೂ ತೆರಳಲು ತಯಾರಿರುವುದಾಗಿ ಎಚ್ಚರಿಕೆ ನೀಡಿದರು.

2ನೇ ವಾರ್ಡ್‍ನ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ಶಿವಕುಮಾರಸ್ವಾಮಿ ಮಾತನಾಡಿ, “2ನೇ ವಾರ್ಡ್‍ನಿಂದ ಸ್ಪರ್ಧಿಸಲು ನಮ್ಮ ನಾಯಕರು ನನಗೆ ಬಿ ಫಾರ್ಮ್ ನೀಡಿದ್ದರು. ಆದರೆ, ರಾಮನಗರ ವಿಧಾನಸಭಾ ಕ್ಷೇತ್ರದ 2018ರ ಪರಾಜಿತ ಅಭ್ಯರ್ಥಿ ಇಕ್ಬಾಲ್ ಹುಸೇನ್, ನಗರಸಭೆ ಮಾಜಿ ಸದಸ್ಯ ಡಿ.ಕೆ.ಶಿವಕುಮಾರ್, ಮಾಜಿ ಅಧ್ಯಕ್ಷೆ ರತ್ನಮ್ಮ ಪತಿ ಪಾಪಣ್ಣ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ,” ಎಂದು ಆರೋಪಿಸಿದರು.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...