ಅಫ್ಘಾನಿಸ್ತಾನದಲ್ಲಿ ಸಿಲುಕಿದ ತೀರ್ಥಹಳ್ಳಿಯ ವ್ಯಕ್ತಿ

Date:

ಶಿವಮೊಗ್ಗ ಮೂಲದ ಪಾದ್ರಿಯೊಬ್ಬರು ತಾಲಿಬಾನ್ ಉಗ್ರ ಸಂಘಟನೆ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಸಿಕ್ಕಿಬಿದ್ದಿದ್ದಾರೆ. ರಕ್ಷಣೆಯ ನಿರೀಕ್ಷೆಯಲ್ಲಿಯಲ್ಲಿ ಅವರು ಇದ್ದು, ಕುಟುಂಬದವರು, ಕ್ರೈಸ್ತ ಸಮುದಾಯ ಈಗ ಆತಂಕದಲ್ಲಿದೆ.

ಅಫ್ಘಾನಿಸ್ತಾನದ ತಾಲಿಬಾನ್ ಫೋಟೋ
ತೀರ್ಥಹಳ್ಳಿ ತಾಲೂಕಿನ ದೊಡ್ಡಮನೆ ಕೇರಿ ವಾಸಿಯಾಗಿರುವ ಫಾದರ್ ರಾಬರ್ಟ್ ಅಫ್ಘಾನಿಸ್ಥಾನದಲ್ಲಿದ್ದಾರೆ. ಧರ್ಮ ಪ್ರಚಾರದ ಉದ್ದೇಶದಿಂದ ಅವರು ಅಫ್ಘಾನಿಸ್ಥಾನದ ಬಾಮಿಯಾನ್ ಎಂಬಲ್ಲಿ ಚರ್ಚ್‌ನಲ್ಲಿದ್ದು, ಸೇವೆ ಸಲ್ಲಿಸುತ್ತಿದ್ದರು. ಈಗ ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶದಲ್ಲಿದೆ. ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರದ ಫಾದರ್ ರಾಬರ್ಟ್ ಬಾಮಿಯಾನ್ ಪ್ರಾಂತ್ಯದಲ್ಲೇ ಸಿಕ್ಕಿಬಿದ್ದಿದ್ದಾರೆ. ವಿಶ್ವಸಂಸ್ಥೆಯ ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆ.
ಫಾದರ್ ರಾಬರ್ಟ್ ಸುರಕ್ಷತೆ ಕುರಿತು ಮಂಗಳೂರು ಮೂಲದ ಫಾದರ್ ಜೆರೋಮ್ ಸಿಕ್ವೇರಾ ಭಾರತದಲ್ಲಿರುವ ತಮ್ಮ ಸಹವರ್ತಿಗಳಿಗೆ ಈ-ಮೇಲ್ ಮಾಡಿದ್ದಾರೆ. ಫಾದರ್ ಜೆರೋಮ್ ಸಿಕ್ವೇರಾ ಅಫ್ಘಾನಿಸ್ಥಾನದ ಕಾಬುಲ್‌ನಲ್ಲಿ ಧರ್ಮ ಸೇವೆಯಲ್ಲಿದ್ದಾರೆ. ತಮ್ಮ ಈ ಮೇಲ್‌ನಲ್ಲಿ ತೀರ್ಥಹಳ್ಳಿ ಮೂಲದ ಫಾದರ್ ರಾಬರ್ಟ್ ಕುರಿತು ಪ್ರಸ್ತಾಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...