ಪೊಲೀಸರಿಗೆ ತುಳು ಕಲಿಸಿದ ಪೊಲೀಸ್ ಆಯುಕ್ತ

Date:

ಪೊಲೀಸರು ಜನಸ್ನೇಹಿಯಾಗಿರಬೇಕು ಅನ್ನುವುದು ಎಲ್ಲರ ವಾದ. ಜನ ಕಷ್ಟ ಅಂತಾ ಬಂದಾಗ ಸ್ಪಂದಿಸಬೇಕು, ಸಮಸ್ಯೆಗಳನ್ನು ತಾಳ್ಮೆಯಿಂದ ಕೇಳಬೇಕು, ಭಾಷೆಯೂ ಹಿತ-ಮಿತವಾಗಿರಬೇಕು. ಇದು ಜನಸ್ನೇಹಿ ಪೊಲೀಸರ ಲಕ್ಷಣ ಅನ್ನುವುದು ಜನರ ಮಾತು.

ಮಂಗಳೂರು ನಗರ ಪೊಲೀಸರನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನರ ಮಾತೃ ಭಾಷೆಯನ್ನು, ಭಾಷೆ ಗೊತ್ತಿರದ ಪೊಲೀಸರಿಗೆ ಕಲಿಸುವ ಮೂಲಕ ಪೊಲೀಸರನ್ನು ಜನಸ್ನೇಹಿಯನ್ನಾಗಿಸಲು ಪ್ರಯತ್ನಿಸಿದ್ದಾರೆ.

ಪೊಲೀಸರು ಸದಾ ಜನರ ಜೊತೆ ಬೆರೆಯಬೇಕಾಗಿರುವುದರಿಂದ, ಜನರ ಬಳಸುವ ಭಾಷೆ ಪೊಲೀಸರಿಗೂ ತಿಳಿದಿದ್ದರೆ ಕರ್ತವ್ಯ ನಿರ್ವಹಿಸುವುದಕ್ಕೆ ಬಹಳ ಅನುಕೂಲವಾಗುತ್ತದೆ. ತನಿಖೆಯ ದೃಷ್ಟಿಯಿಂದಲೂ, ಜನರ ಸಮಸ್ಯೆಗಳಿಗೂ ಸ್ಪಂದಿಸುವ ದೃಷ್ಟಿಯಿಂದಲೂ ಪ್ರಾದೇಶಿಕ ಭಾಷೆಯ ಅರಿವಿದ್ದರೆ ಒಳ್ಳೆಯದು ಎಂಬುವುದನ್ನು ಕಮೀಷನರ್ ಎನ್. ಶಶಿಕುಮಾರ್ ಮನಗಂಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...