ಈ ದೇವಸ್ಥಾನದಲ್ಲಿ ಹಿಂದೂಗಳ ವಾಹನಗಳಿಗೆ ಮಾತ್ರ ಪಾರ್ಕಿಂಗ್ ಅವಕಾಶ!

Date:

ಸದಾ ಕೋಮು ವಿಷಯದಲ್ಲಿ ಸುದ್ದಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಸದ್ಯ ಮತ್ತೊಂದು ವಿಚಾರಕ್ಕೆ ಚರ್ಚೆಯಾಗುವ ಸಾಧ್ಯತೆಗಳಿವೆ. ಪುತ್ತೂರಿನಲ್ಲಿ ಎಸ್. ಡಿ. ಪಿ. ಐ ಸ್ವಾತಂತ್ರ್ಯ ವೀರ ಸಾವರ್ಕರ್ ರಥಯಾತ್ರೆಗೆ ಅಡ್ಡಿ ಮಾಡಿದ ವಿಚಾರ ದೊಡ್ಡ ಸದ್ದು ಮಾಡಿದ ಬಳಿಕ ಈಗ ಪುತ್ತೂರಿನಲ್ಲಿ ಮತ್ತೊಂದು‌ ವಿಚಾರ ಮುನ್ನಲೆಗೆ ಬಂದಿದೆ.

ಇತಿಹಾಸ ಪ್ರಸಿದ್ಧ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಹಿಂದೂಗಳು ಹೊರತುಪಡಿಸಿ ಅನ್ಯಧರ್ಮದವರು ವಾಹನಗಳನ್ನು ನಿಲ್ಲಿಸಬಾರದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆದೇಶ ಮಾಡಿದೆ.

ದೇವಸ್ಥಾನದ ಎದುರಿನ ವಿಶಾಲವಾದ ಗದ್ದೆಯಲ್ಲಿ ಹಿಂದೂಗಳು ಹೊರತುಪಡಿಸಿ, ಬೇರೆ ಧರ್ಮದವರು ಯಾರೂ ವಾಹನವನ್ನು ನಿಲ್ಲಿಸಬಾರದು ಅಂತಾ ದೇವಸ್ಥಾನ ಪ್ರಕಟಣೆ ಹೊರಡಿಸಿದೆ. ಈ ಕುರಿತು ಚರ್ಚೆಗಳು ಆರಂಭವಾಗಿವೆ.

 

ಅಲ್ಲದೇ ಬೇರೆ ಧರ್ಮದವರು ವಾಹನ ನಿಲ್ಲಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಆದೇಶದಲ್ಲಿ ತಿಳಿಸಿದೆ. ಈ ಬಗ್ಗೆ ದೇವಳದ ದೇವಮಾರು ಗದ್ದೆಯಲ್ಲಿರುವ ಪಂಚಾಕ್ಷರಿ ಮಂಟಪದಲ್ಲಿ ಫ್ಲೆಕ್ಸ್ ಹಾಕಲಾಗಿದ್ದು, ಅನ್ಯಧರ್ಮದವರು ದೇವಳದ ಗದ್ದೆಯಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

 

 

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...