ಹಾಳಾಗಿ ಹೋಗ್ತೀಯಾ…! ಕೊಳ್ಳೇಗಾಲ ಅಂದಾಕ್ಷಣ ಸಿಎಂ ಕಾಲ್ಕಿತ್ತಿದ್ದು ಯಾಕೆ..?

Date:

ಸಿಎಂ ಗೆ ಹೀಗೆ ಶಾಪ ಹಾಕಿದ್ದಾದ್ರು ಯಾರು, ಯಾಕೆ ಗೊತ್ತಾ…?
ಸಾರ್ ನಮ್ಮ ತಾಯಿಗೆ ಮೈ ಹುಷಾರಿಲ್ಲ, ಏನಾದ್ರೂ ಸಹಾಯ ಮಾಡಿ ಎಂದು ಬೇಡಿಕೊಂಡವನಿಗೆ ಸಿಎಂ ಸಾಹೇಬ್ರು ಸ್ಪಂದಿಸದೇ ತರಾತುರಿಯಲ್ಲಿ ಕಾರು ಏರಿದ್ರು. ಆಗ ಸಿಎಂ ಅನ್ನು ಭೇಟಿ ಮಾಡ್ಬೇಕು ಅಂತ ಬಂದಿದ್ದ ವ್ಯಕ್ತಿ ಆಕ್ರೋಶಭರಿತವಾಗಿ “ಹಾಳಾಗಿ ಹೋಗ್ತೀಯಾ” ಅನ್ನೋ ಶಾಪ ಹಾಕಿದ.
ಯದುವೀರ್ ಅರಸ್ ಮದುವೆಗೆ ಭೇಟಿ ನೀಡಿ ಸೋಮವಾರ ರಾತ್ರಿ ಮೈಸೂರಿನಲ್ಲೇ ತಂಗಿದ್ದ ಸಿದ್ದರಾಮಯ್ಯ ಬೆಳಗ್ಗೆ ಜನತಾ ದರ್ಶನವನ್ನು ಹಮ್ಮಿಕೊಂಡಿದ್ದರು. ಮೈಸೂರಿನ ತಮ್ಮ ನಿವಾಸದ ಬಳಿ ಜನರಿಂದ ಅಹವಾಲು ತೆಗೆದುಕೊಳ್ಳುವ ಕಾರ್ಯಕ್ರಮ ಇಟ್ಟುಕೊಂಡಿದ್ದರು.
ಆಗ ಆಗಮಿಸಿದ ಒಬ್ಬ ವ್ಯಕ್ತಿ ಸಿದ್ದರಾಮಯ್ಯ ಅವರಿಗೆ ಕೆಂಪು ಶಾಲೊಂದನ್ನು ನೀಡಲು ಬಂದಿದ್ದಾರೆ. ಪೂಜೆ ಮಾಡಿ ತಂದಿದ್ದೇನೆ ಇದನ್ನು ಸಿದ್ದರಾಮಯ್ಯ ಅವರಿಗೆ ನೀಡುತ್ತೇನೆ ಎಂದು ಕಾರು ಏರಲು ಮುಂದಾಗಿದ್ದ ಸಿಎಂ ಬಳಿ ತೆರಳಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆದಿದ್ದಾರೆ.
ನಂತರ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ಪ್ರಶ್ನೆ ಮಾಡಿದಾಗ “ನಾನು ಕೊಳ್ಳೇಗಾಲದವನು ಸ್ವಾಮಿ, ಏನಾದ್ರೂ ಸಹಾಯ ಮಾಡಿ ಎನ್ನುತ್ತಾ ಮುಂದಕ್ಕೆ ಬರುವ ಪ್ರಯತ್ನ ಮಾಡಿದ್ದಾರೆ. ಇದೇ ಸಮಯಕ್ಕೆ ಸರಿಯಾಗಿ ಸಿಎಂ ಕಾರು ಏರಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ವ್ಯಕ್ತಿ ಸಿಎಂ ಕಾರಿನ ಕಿಟಕಿ ಬಳಿ ತೆರಳಿ “ಹಾಳಾಗಿ ಹೋಗ್ತೀಯಾ” ಎಂದು ಹೇಳಿ ಅಲ್ಲಿಂದ ತೆರಳಿದ್ದಾರೆ.
ಇದು ಕಾಕತಾಳೀಯವೋ ಅಥವಾ ಬೇಕಂತಲೇ ಮಾಡಿದ್ದೋ ಗೊತ್ತಿಲ್ಲ. ಆದರೆ ಕೊಳ್ಳೆಗಾಲ ಎನ್ನುವುದಕ್ಕೂ ಸಿಎಂ ದೂರ ಸರಿಯುವುದಕ್ಕೂ ಸರಿಯಾಗಿತ್ತು. ಒಟ್ನಲ್ಲಿ ಕೊಳ್ಳೇಗಾಲ ಅಂದಿದ್ದೇ ಸಿಎಂ ಕಾಲ್ಕಿತ್ತದ್ದು ಸತ್ಯ ಅನ್ನೋದು ಅಲ್ಲಿ ಈ ಘಟನೆಯನ್ನ ಪ್ರತ್ಯಕ್ಷವಾಗಿ ಕಣ್ತುಂಬಿಕೊಂಡ ಜನರ ಮಾತು

  • ಶ್ರೀ

POPULAR  STORIES :

ಹುಡುಗಿಯರಿಗೆ ಕಿರುಕುಳ ಕೊಡ್ತಿದ್ದ 420ಗೆ ಧರ್ಮದೇಟು..! ಹೆಂಗಿದ್ದಾ ಹೆಂಗಾದ? ಬೇಕಿತ್ತಾ ಪಾಪಿ ನಿನಗಿದು?

ಗ್ರೇಟ್ ಖಲಿಯ ಶಿಷ್ಯನನ್ನು ಸೋಲಿಸಿದ ಹರ್ಭಜನ್ ಸಿಂಗ್..!

ವೆಂಕಟ್ ಗೆ ಮತ್ತೆ ಹುಚ್ಚು ಹಿಡೀತಾ? ಹುಚ್ಚ ವೆಂಕಟ್ ರಮ್ಯಾಗೆ ಎನಂದ್ರು ಗೊತ್ತಾ..?

26 ವರ್ಷದ ಮಾಡೆಲಿಂಗ್ ಹುಡುಗಿ 62 ವರ್ಷದ ತಾತನನ್ನೇ ಯಾಕೆ ಮದುವೆಯಾದ್ಲು?

ರೈಲು ನಿಲ್ದಾಣದಲ್ಲಿ ಪುಕ್ಕಟೆ ವೈ-ಫೈನಲ್ಲಿ ಭಾರತೀಯರು ಏನ್ ಹುಡುಕುತ್ತಾರೆ? ಗೂಗಲ್ ಬಯಲು ಮಾಡಿದ ರಹಸ್ಯ!

ಪ್ರೀತಿಸಿದ ಹುಡುಗನ ಎದೆಗೊರಗಿ ಪ್ರಾಣ ಬಿಡುವ ಮೊದಲು..!? ಅವಳು ಯಾರು? ಯಾಕಾಗಿ ಅವನನ್ನು ದೂರವಿಟ್ಟಳು..!?

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...