SBI ಗ್ರಾಹಕರೇ ಗಮನಿಸಿ; ಈ ಸೇವೆಗಳು ಸ್ಥಗಿತಗೊಳ್ಳಲಿವೆ

Date:

ಎಲ್ಲಾ ಭಾರತೀಯ ಬ್ಯಾಂಕುಗಳು ತಮ್ಮ ಬ್ಯಾಂಕಿಂಗ್‌ ಸೇವೆಯನ್ನು ಸುಗಮವಾಗಿ ನಿರ್ವಹಣೆ ಮಾಡಬೇಕಾದರೆ ನಿಗದಿತವಾದ ನಿರ್ವಹಣಾ ಸೇವೆಯನ್ನು ಭರಿಸಬೇಕಾಗುತ್ತದೆ. ಈ ಮೂಲಕ ಬ್ಯಾಂಕುಗಳು ನೆಟ್‌ ಬ್ಯಾಂಕಿಂಗ್‌ ಅಥವಾ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳು ದಿಢೀರನ್ನೆ ಸ್ಥಗಿತಗೊಳ್ಳುವುದನ್ನು ಹಾಗೂ ಯಾವುದೇ ರೀತಿಯ ವೈಫಲ್ಯವನ್ನು ತಡೆಯಲು ಸಹಕಾರಿ ಆಗಿದೆ.

 

ಈ ಸಂದರ್ಭದಲ್ಲಿ ಗ್ರಾಹಕರಿಗೆ ಒಂದು ನಿರ್ದಿಷ್ಟ ಸಮಯದ ಗಡುವು ನೀಡಿ ನಿರ್ವಹಣಾ ಕಾರ್ಯವನ್ನು ಬ್ಯಾಂಕುಗಳು ಮಾಡಬೇಕಾಗುತ್ತದೆ. ಇದು ಯಶಸ್ವಿಯಾದ ಬಳಿಕ ಬ್ಯಾಂಕಿಂಗ್‌ ಸೇವೆಯು ಪುನರ್‌ ಆರಂಭವಾಗುತ್ತದೆ.

ಈ ಹಿನ್ನೆಲೆಯಿಂದಾಗಿ ತಮ್ಮ ನಿರ್ವಹಣಾ ಕಾರ್ಯದ ಬಗ್ಗೆ ಭಾರತದ ಅತೀ ದೊಡ್ಡ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ತಮ್ಮ ಗ್ರಾಹಕರಿಗೆ ಈ ಬಗ್ಗೆ ಈಗಲೇ ಎಚ್ಚರಿಕೆಯನ್ನು ನೀಡಿದೆ. ಈ ನಿರ್ವಹಣಾ ಕಾರ್ಯ ನಡೆಯುವ ಸಂದರ್ಭದಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಇಂಟರ್‌ನೆಟ್‌ ಬ್ಯಾಂಕಿಂಗ್‌ ಸೇವೆ, ಯೋನೋ, ಯೋನೋ ಲೈಟ್‌ ಹಾಗೂ ಯುಪಿಐ ಸೇವೆಯು ಈ ಸಂದರ್ಭದಲ್ಲಿ ನಿರ್ವಹಣೆ ಆಗುವುದಿಲ್ಲ ಎಂದು ಬ್ಯಾಂಕ್‌ ಟ್ವೀಟ್‌ನಲ್ಲಿ ತಿಳಿಸಿದೆ. ಹಾಗಾದರೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಬ್ಯಾಂಕಿಂಗ್‌ ಸೇವೆಗಳು ಯಾವಾಗ ಸ್ಥಗಿತವಾಗಲಿದೆ, ಇಲ್ಲಿದೆ ವಿವರ ಮುಂದೆ ಓದಿ.

 

ಈ ಬಗ್ಗೆ ಟ್ವೀಟ್‌ ಮಾಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, “ನಮ್ಮ ಗೌರವಾನ್ವಿತ ಗ್ರಾಹಕರು ನಾವು ಇನ್ನೂ ಹೆಚ್ಚು ಗುಣಮಟ್ಟದ ಸೇವೆಯನ್ನು ನೀಡಲು ಬೇಕಾಗಿ ಕೈಗೊಳ್ಳಲಾಗುವ ನಿರ್ವಹಣಾ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇವೆ,” ಎಂದು ಹೇಳಿದೆ.

 

“ನಮ್ಮ ಗ್ರಾಹಕರಿಗೆ ಅಧಿಕ ಸುರಕ್ಷೆಯನ್ನು ಒದಗಿಸುವ ನಿಟ್ಟಿನಲ್ಲಿ ನಾವು ನಮ್ಮ ವ್ಯವಸ್ಥೆಯನ್ನು ಅಪ್‌ಗ್ರೇಡ್‌ ಮಾಡುತ್ತಿದ್ದೇವೆ. ಇದು ಅಕ್ಟೋಬರ್‌ 10 ರಂದು ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಇಂಟರ್‌ನೆಟ್‌ ಬ್ಯಾಂಕಿಂಗ್‌, ಯೋನೋ, ಯೋನೋ ಲೈಟ್‌, ಯೋನೋ ಬಿಸ್‌ನೆಸ್‌, ಯುಪಿಐ, ಇ-ಪೇ, ಎಟಿಎಂ ಸೇವೆಯು ಸ್ಥಗಿತವಾಗುತ್ತದೆ,” ಎಂದು ಮಾಹಿತಿ ನೀಡಿದೆ.

“ಈ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ನಮ್ಮೊಂದಿಗೆ ಸಹಕರಿಸಲು ನಮ್ಮ ಗ್ರಾಹಕರ ಬಳಿ ವಿನಂತಿ ಮಾಡುತ್ತೇವೆ,” ಎಂದು ಕೂಡಾ ತಿಳಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ “ಪ್ರೀ ರಿವಾರ್ಡ್ ದೊರೆಯುವ ಆಫರ್‌ಗಳ ಬಗ್ಗೆ ಎಚ್ಚರವಾಗಿರಿ, ಧನ್ಯವಾದಗಳು,” ಎಂದು ಕೂಡಾ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ತನ್ನ ಗ್ರಾಹಕರಿಗೆ ವಿನಂತಿ ಮಾಡಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...