ಅಕ್ಟೋಬರ್ 15ರವರೆಗೆ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

Date:

ಬೆಂಗಳೂರು ಸೇರಿದಂತೆ ರಾಜ್ಯದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಭಾಗದ ಅರಬ್ಬಿ ಸಮುದ್ರದದಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಈ ಮೇಲ್ಮೈ ಸುಳಿಗಾಳಿ ಶನಿವಾರದ ವೇಳೆಗೆ ದುರ್ಬಲಗೊಳ್ಳಲಿದೆ. ನಂತರ ಅಂಡಮಾನ್‌ ಉತ್ತರ ಭಾಗದಲ್ಲಿ ಸಣ್ಣ ಪ್ರಮಾಣದ ಟ್ರಫ್ ಸೃಷ್ಟಿಯಾಗಲಿದ್ದು, ಅದು ಆಂಧ್ರ ಪ್ರದೇಶದ ಕರಾವಳಿ ಮಾರ್ಗವಾಗಿ ಸಾಗಲಿದೆ. ಈ ಕಾರಣಗಳಿಂದ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅ.12ರಂದು ಮತ್ತೆ ಚುರುಕಾಗಲಿರುವ ಮುಂಗಾರು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜ ನಗರ, ರಾಯಚೂರು, ಬೀದರ್‌, ಯಾದಗಿರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಧಾರಕಾರವಾಗಿ ಸುರಿಯುವ ಸಾಧ್ಯತೆಯಿದೆ.

 

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌

‌ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್.!‌ ಬೆಂಗಳೂರು: ಸಿಲಿಕಾನ್‌...

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ: ಡಿ.ಕೆ. ಶಿವಕುಮಾರ್

ನೂತನ ಐಟಿ ನಗರಕ್ಕೆ ನಿರಂತರ ಹೂಡಿಕೆ, 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ:...

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್

ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್ ಬೆಂಗಳೂರು: ನಗರದ...

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ

ಮೊಳಕೆ ಕಾಳು ತಿನ್ನುವುದರಿಂದ ಆರೋಗ್ಯಕ್ಕೆ ಏನೇನು ಲಾಭ ತಿಳಿಯಿರಿ ಇತ್ತೀಚಿನ ದಿನಗಳಲ್ಲಿ ಆರೋಗ್ಯ...