ಪೊಲೀಸರು ವಾಹನ ತಪಾಸಣೆ ಮಾಡುವ ವೇಳೆ ಅಪಘಾತ ಭೀಕರ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ನಾಗರಾಜು (60) ಹಾಗೂ ಚಿದಾನಂದ (45) ಮೃತ ದುರ್ದೈವಿಗಳು.
ತಿಪಟೂರು ತಾಲೂಕಿನ ಬಳುವನೇರಳು ಗೇಟ್ ಬಳಿ ಹೊನ್ನವಳ್ಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು.
ಈ ವೇಳೆ ಬೈಕ್ನಲ್ಲಿ ತಿಪಟೂರು ಕಡೆಗೆ ತೆರಳುತ್ತಿದ್ದ ನಾಗರಾಜು ಮತ್ತು ಚಿದಾನಂದ ಎಂಬುವವರು ಪೊಲೀಸರು ಇರೋದನ್ನು ನೋಡಿ ಹೆದರಿ ಬೈಕ್ ಬೇರೆಡೆಗೆ ತಿರುಗಿಸಿದ್ದಾರೆ. ಈ ವೇಳೆ ಎದುರು ಬರುತ್ತಿದ್ದ ಬುಲೆರೋ ಜೀಪ್ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಈ ಅಪಘಾತಕ್ಕೆ ಪೊಲೀಸರೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.