No menu items!
11.1 C
Munich
Wednesday, April 29, 2026

16 ದಿನಗಳ ಹಿಂದೆ ಮದುವೆ, ಈಗ ವಿವಾಹಿತೆ ಸಾವು!

Must read

ಮದುವೆಯಾದ ಕೇವಲ 16 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.

ಚೈತನ್ಯ (19) ಮೃತ ನವವಿವಾಹಿತೆ. ಈಕೆ ಗುಂಟೂರಿನ ರೆಪಲ್ಲಿ ವಲಯದ ಎಡುಪಲ್ಲಿ ಗ್ರಾಮದ ನಿವಾಸಿ.

16 ದಿನಗಳ ಹಿಂದಷ್ಟೇ ಗುಂಟೂರು ಗ್ರಾಮೀಣ ವಲಯದ ದಾಸರಿಪಲೇಮ್​ ಗ್ರಾಮದ ಕೋಟಿ ಸಂಬಿರೆಡ್ಡಿ ಎಂಬಾತನೊಂದಿಗೆ ಸಪ್ತಪದಿ ತುಳಿದಿದ್ದಳು. ಸಂಬಿರೆಡ್ಡಿ ಹೈದರಾಬಾದ್​ ಸಾಫ್ಟ್​ವೇರ್​ ಕಂಪನಿ ಒಂದರ ಉದ್ಯೋಗಿ. ಪ್ರಸ್ತುತ ವರ್ಕ್​ ಫ್ರಮ್​ ಹೋಮ್​ ಮಾಡುತ್ತಿದ್ದ.

ಹಬ್ಬದ ಹಿನ್ನೆಲೆಯಲ್ಲಿ 16 ದಿನಗಳ ಕಾಲ ತವರು ಮನೆಯಲ್ಲಿದ್ದ ಚೈತನ್ಯಳನ್ನು ಎರಡು ದಿನಗಳ ಹಿಂದೆ ದಾಸರಿಪಲೇಮ್​ ಗ್ರಾಮದ ಅತ್ತೆಯ ಮನೆಗೆ ಬಿಟ್ಟು ಬಂದಿದ್ದರು. ಒಂದು ದಿನ ಮಗಳ ಜತೆಯಲ್ಲೇ ಉಳಿದಿದ್ದ ತಾಯಿ ಸೋಮವಾರ ಮಧ್ಯಾಹ್ನ ತಮ್ಮ ಮನೆಗೆ ಹಿಂತಿರುಗಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಟಿವಿ ನೋಡುತ್ತಾ ಕುಳಿತಿದ್ದವಳು ಎದ್ದು ಬಾತ್​ರೂಮ್​ಗೆ ತೆರಳಿದ್ದಾಳೆ. ಸಾಕಷ್ಟು ಸಮಯದವರೆಗೂ ಆಕೆ ವಾಪಸ್​ ಬರದಿದ್ದನ್ನು ನೋಡಿ ಅತ್ತೆ ಮನೆಯವರು ಹೋಗಿ ಬಾತ್​ರೂಮ್​ ಬಾಗಿಲು ತೆರೆದು ನೋಡಿದಾಗ ಆಕೆ ಬಾತ್​ರೂಮ್​ ಕಿಟಕಿಗೆ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದಾದರೂ ಅಷ್ಟರಲ್ಲಾಗಲೇ ಆಕೆಯ ಪ್ರಾಣ ಪಕ್ಷಿ ಹಾರಿಹೋಗಿದ್ದನ್ನು ವೈದ್ಯರು ದೃಢಪಡಿಸಿದರು.

ಮಗಳನ್ನು ಕಳೆದುಕೊಂಡು ಕುಟುಂಬದಲ್ಲಿ ದುಃಖ ಮಡುಗಟ್ಟಿದ್ದು, ಚೈತನ್ಯಳ ಗಂಡ ಮತ್ತು ಅತ್ತೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಅದನ್ನು ಸಹಿಸದೇ ಚೈತನ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಆಕೆಯ ಪಾಲಕರು ಆರೋಪ ಮಾಡಿದ್ದಾರೆ. ಈ ಸಂಬಂಧ ದೂರು ಸಹ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article