3 ಬೈಕ್‌ಗೆ ಟ್ರಾಕ್ಟರ್ ಡಿಕ್ಕಿ; ಮಳೆಯೇ ಉಳಿಸಿತು ಪ್ರಾಣ

Date:

ಟ್ರ್ಯಾಕ್ಟರ್​ನಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮೂರು ಬೈಕ್​ಗಳು ಜಖಂಗೊಂಡಿದ್ದು, ಭಾರಿ ಅವಘಡವೊಂದು ತಪ್ಪಿಹೋಗಿದೆ. ಅದರಲ್ಲೂ ಯಾವುದೇ ಸಾವು-ನೋವು ಸಂಭವಿಸದಂತೆ ಮಳೆಯೇ ಕಾಪಾಡಿದೆ.

ಬಾಗಲಕೋಟೆ ಜಿಲ್ಲೆಯ‌ ಮುಧೋಳದ ರನ್ನ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಒಳಗಾಗಿದ್ದು ಮುಗಳಖೋಡದಿಂದ ಐಸಿಪಿಎಲ್ ಶುಗರ್ ಫ್ಯಾಕ್ಟರಿಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್. ಅದರ ಚಕ್ರದ ಬೇರಿಂಗ್​ ಕಟ್​ ಆಗಿದ್ದೇ ಅಪಘಾತಕ್ಕೆ ಕಾರಣ.

ಗಾಲಿಯ ಬೇರಿಂಗ್ ಕಟ್​ ಆಗಿದ್ದರಿಂದ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾಗಿದೆ. ಪರಿಣಾಮವಾಗಿ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬೈಕ್​ಗಳು ಅದರ ಅಡಿಗೆ ಸಿಲುಕಿ ಜಖಂಗೊಂಡಿವೆ. ಮಳೆ ಬರುತ್ತಿದ್ದ ಕಾರಣ ವಾಹನ ಸವಾರರು ದ್ವಿಚಕ್ರವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಹತ್ತಿರದ ಅಂಗಡಿ-ಮುಂಗಟ್ಟುಗಳಲ್ಲಿ ಆಶ್ರಯ ಪಡೆದಿದ್ದರು. ಹೀಗಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...