ವಿಧಾನಸಭೆಯಲ್ಲೇ ಪತ್ನಿ ನಿಂಧನೆ; ಗಳಗಳನೆ ಅತ್ತ ಮಾಜಿ ಸಿಎಂ

Date:

ಕಳೆದ ಕೆಲ ತಿಂಗಳುಗಳಿಂದ ತಮ್ಮ ಹಾಗೂ ಕುಟುಂಬದ ಮೇಲೆ ಆಗುತ್ತಿರುವ ತೀವ್ರ ವಾಗ್ದಾಳಿಯಿಂದ ಅಪಮಾನಗೊಂಡಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಭಾರಿ ಶಪಥವೊಂದನ್ನು ಮಾಡಿದ್ದಾರೆ.

ಮುಖ್ಯಮಂತ್ರಿ ಆಗುವವರೆಗೂ ನಾನು ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ವಿಧಾನಸಭೆಯಲ್ಲಿ ತಮ್ಮ ಪತ್ನಿ ಭುವನೇಶ್ವರಿಗೆ ವಿಧಾನಸಭೆಯಲ್ಲಿ ತೀವ್ರವಾಗಿ ಅವಮಾನ ಮಾಡಲಾಗಿದೆ. ನನ್ನ ರಾಜಕೀಯ ಜೀವನದಲ್ಲಿ ಇಷ್ಟೊಂದು ನೋವು ಹಿಂದೆಂದೂ ಅನುಭವಿಸಿಲ್ಲ. ನನ್ನ ಜೀವನದಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲು. ವಿಧಾನಸಭೆ ಆರಂಭವಾದಾಗಿನಿಂದಲೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಚಿವರು ಮತ್ತು ಶಾಸಕರು ನಿಂದಿಸುತ್ತಲೇ ಬಂದಿದ್ದಾರೆ. ಅವರು ನನ್ನ ಕುಟುಂಬದವರನ್ನೂ ಬಿಡಲಿಲ್ಲ. ಇದನ್ನು ನಾನು ಸಹಿಸಲು ಸಾಧ್ಯವೇ ಇಲ್ಲ. ಅಧಿಕಾರ ಸಿಗುವವರೆಗೂ ನಾನಿಲ್ಲಿ ಕಾಲಿಡಲ್ಲ’ ಎಂದು ನಾಯ್ಡು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸುತ್ತಾ ಗಳಗಳನೆ ಅತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆಂಗಳೂರು: ಬೆಂಗಳೂರು...