ಅಪ್ಪು ಸಾವು ಅರಗಿಸಿಕೊಳ್ಳಲಾಗದೇ ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆ

Date:

ನಟ ಪುನೀತ್ ರಾಜ್ಕುಮಾರ್ ಅವರ ನಿಧನದಿಂದ ನೊಂದ ಅಭಿಮಾನಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸನ ನಗರದ ಮಯೂರ ಎಂಬುವವರು ಅಪ್ಪು ನಿಧನದಿಂದ ಮನನೊಂದು ಸಾವಿಗೆ ಶರಣಾಗಿದ್ದಾರೆ. ಪುನೀತ್ ನಿಧನದ ಬಳಿಕ ಖಿನ್ನತೆಗೊಳಗಾಗಿ ಮಂಕಾಗಿದ್ದ ಮಯೂರ ಇದೀಗ ನೇಣಿಗೆ ಶರಣಾಗಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವರು ಹಾಸನದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ಹಾ.ರಾ.ನಾಗರಾಜ್ ಪುತ್ರನಾಗಿದ್ದಾರೆ.
ನಟ ಪುನೀತ್ ಅವರ ದೊಡ್ಡ ಅಭಿಮಾನಿಯಾಗಿದ್ದ ಮಯೂರ, ಅಪ್ಪು ಅವರನ್ನು ಹಲವು ಬಾರಿ ಭೇಟಿಯಾಗಿದ್ದರು. ಅವರ ಸಾವಿನ ಬಳಿಕ ಆಘಾತಗೊಂಡು, ಮಾನಸಿಕವಾಗಿ ನೊಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ನಿತ್ಯ ಅಪ್ಪುವಿನ ಹತ್ತಾರು ಸ್ಟೇಟಸ್ ಹಾಕಿಕೊಂಡು ದುಃಖ ಹೊರಹಾಕುತ್ತಿದ್ದರು. ನೆನ್ನೆ (ನವೆಂಬರ್ 24) ಸಂಜೆ ಹಾಸನ ನಗರದ ರಾಜಕುಮಾರ ನಗರದ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...