ರೈಲ್ವೆ ಹಳಿ ಮೇಲೆ ಪತ್ತೆಯಾಯ್ತು ಖ್ಯಾತ ಗಾಯಕಿ ತಂದೆ ಶವ; ಸಾವಿನ ಸುತ್ತ ಅನುಮಾನದ ಹುತ್ತ

Date:

ಖ್ಯಾತ ಗಾಯಕಿ ಹರಿಣಿ ಅವರ ತಂದೆ ಎ.ಕೆ. ರಾವ್​ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ರೈಲ್ವೇ ಹಳಿ ಮೇಲೆ ಮೃತದೇಹ ಪತ್ತೆ ಆಗಿದೆ. ಈ ಸಂಬಂಧ ಹರಿಣಿ ಕುಟುಂಬದವರು ದೂರು ನೀಡಿದ್ದಾರೆ. ಈ ಸಾವಿನ ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ.

 

ಯಲಹಂಕ ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋಮೀಟರ್​ ದೂರದಲ್ಲಿ ಎ.ಕೆ. ರಾವ್​ ಅವರ ಮೃತದೇಹ ಸಿಕ್ಕಿದೆ. ನ.22ರ ರಾತ್ರಿಯೇ ಈ ಘಟನೆ ನಡೆದಿದೆ.

ಹರಿಣಿ ಮತ್ತು ಅವರ ಕುಟುಂಬದವರು ಹೈದರಾಬಾದ್​ನಲ್ಲಿ ವಾಸವಾಗಿದ್ದರು. ಆದರೆ ಕೆಲವು ದಿನಗಳಿಂದ ಇಡೀ ಕುಟುಂಬ ನಾಪತ್ತೆ ಆಗಿದ್ದರು ಎಂಬ ಮಾಹಿತಿ ಇದೆ. ಈ ಎಲ್ಲ ಕಾರಣಗಳಿಂದಾಗಿ ಎ.ಕೆ. ರಾವ್ ಸಾವಿನ ಕೇಸ್​ ಅನುಮಾನ ಮೂಡಿಸಿದೆ. ಮೃತದೇಹದ ಜೊತೆ ಆಧಾರ್​ ಕಾರ್ಡ್​ ಸಿಕ್ಕಿದೆ. ಅಲ್ಲದೇ, ದೂರು ನೀಡಲು ಸಿದ್ಧಪಡಿಸಿರುವ ಪತ್ರ ಹಾಗೂ ಕೆಲವು ಡಾಕ್ಯುಮೆಂಟ್​ಗಳು ಸಹ ಪತ್ತೆ ಆಗಿವೆ. ತಂದೆಯ ಸಾವು ಅನುಮಾನಾಸ್ಪದ ಆಗಿದೆ ಎಂದು ಎ.ಕೆ. ರಾವ್​ ಪುತ್ರಿ ಶಾಲಿನಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

‘ನಮ್ಮ ತಂದೆ ಕೊಲೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವವರಲ್ಲ’ ಎಂದು ದೂರಿನಲ್ಲಿ ಹೇಳಲಾಗಿದೆ. ಅದರ ಅನ್ವಯ 174 C, 302 ಸೆಕ್ಷನ್ ಅಡಿಯಲ್ಲಿ ದೂರು ದಾಖಲಾಗಿದೆ. ಮೃತದೇಹದಲ್ಲಿ ಎಡಗೈ ನರ ಕಟ್ ಆಗಿದೆ. ಕುತ್ತಿಗೆಗೆ ಚಾಕುವಿನಿಂದ ಇರಿದಿರುವುದು ತಿಳಿದುಬಂದಿದೆ. ಮೃತದೇಹದ ಬಳಿಯಲ್ಲಿ ಚಾಕು ಸಹ ಸಿಕ್ಕಿದೆ. ಪ್ರಾಥಮಿಕ ತನಿಖೆ ವೇಳೆ ಇದು ಆತ್ಮಹತ್ಯೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಕೇಸ್ ದಾಖಲು ಮಾಡಿಕೊಂಡಿರುವ ಬೆಂಗಳೂರು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...